ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಭೀಕರ ಅಪಘಾತ: 9 ಯುವತಿಯರು ಸಾವು

Last Updated 30 ಏಪ್ರಿಲ್ 2016, 4:42 IST
ಅಕ್ಷರ ಗಾತ್ರ

ಚಳ್ಳಕೆರೆ/ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಸಮೀಪ ಶನಿವಾರ ಬೆಳಗಿನಜಾವ 3.30ಕ್ಕೆ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರಿಗೆ ಸಂದರ್ಶನಕ್ಕೆ ಹೋಗಿದ್ದ ಬಳ್ಳಾರಿ ಜಿಲ್ಲೆ ಶಿರಗುಪ್ಪ ತಾಲ್ಲೂಕಿನ 9 ಯುವತಿಯರು ಮೃತಪಟ್ಟಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಬರುತ್ತಿದ್ದ ಕ್ರೂಸರ್ ಹಾಗೂ ಚಳ್ಳಕೆರೆಯಿಂದ ಹಿರಿಯೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಡಿಕ್ಕಿಯಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗೆ ಕ್ರೂಸರ್ ಡಿಕ್ಕಿಯಾಗಿದೆ.

ಕ್ರೂಸರ್‌ನಲ್ಲಿ 15 ಜನ ಬೆಂಗಳೂರಿಗೆ ತೆರಳಿ, ಸಂದರ್ಶನ ಮುಗಿಸಿ ಹಿಂದಿರುಗುತ್ತಿದ್ದರು. ಕ್ರೂಸರ್‌ನಲ್ಲಿದ್ದ ಎಲ್ಲರೂ ಯುವತಿಯರು. ಈ ಪೈಕಿ 7 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 8 ಜನ ಗಾಯಗೊಂಡಿದ್ದಾರೆ. ಚಿತ್ರದುರ್ಗ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುವತಿಯರ ಜತೆ ತೆರಳಿದ್ದ ಕಂಪ್ಯೂಟರ್ ತರಬೇತುದಾರ ಪ್ರದೀಪ್ ಗಾಯಗೊಂಡಿದ್ದಾರೆ. ಮೃತರು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ವಿದ್ಯಾರ್ಥಿಗಳು ಎನ್ನಲಾಗಿದ್ದು, ವಿವಿಧೆಡೆಯಿಂದ ವ್ಯಾಸಂಗಕ್ಕಾಗಿ ಇಲ್ಲಿ ನೆಲೆಸಿದ್ದರು. ಜಯಶ್ರೀ, ಸುನಿತಾ, ಶಾಂತಿ, ಕೋರಿ‌ ಶ್ವೇತಾ, ಶ್ರುತಿಕೊರಿ ಮೃತರು.‌

ಯುವತಿಯರು ಬೆಂಗಳೂರಿಗೆ ಉದ್ಯೋಗಕ್ಕಾಗಿ ಸಂದರ್ಶನಕ್ಕೆ ತೆರಳಿದ್ದರು ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT