ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಹಿಂಸಾಚಾರ: ವ್ಯಕ್ತಿ ಬಲಿ

Last Updated 19 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಭುವನೇಶ್ವರ (ಐಎಎನ್‌ಎಸ್‌): ಒಡಿಶಾದ ಕೇಂದ್ರಪಾದ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಚುನಾವಣೋತ್ತರ ಹಿಂಸಾಚಾರ ಭುಗಿಲೆದ್ದಿದ್ದು, ಬಿಜು ಜನತಾದಳದ (ಬಿಜೆಡಿ) ಬೆಂಬಲಿಗ­ರೊಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಹಿಂಸಾಚಾರದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ  ನಿಷೇಧಾಜ್ಞೆ ಜಾರಿಗೊಳಿಸ­ಲಾಗಿದೆ ಎಂದು ಜಿಲ್ಲಾಧಿ­ಕಾರಿ ನಿತಿನ್‌ ಭಾನು ದಾಸ್‌ ಜಾವಳೆ ಹೇಳಿದ್ದಾರೆ.
ಮುಂದಿನ 24 ಗಂಟೆಗಳ ಕಾಲ ಅಥವಾ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವ­ವರೆಗೆ ನಿಷೇಧಾಜ್ಞೆ ಜಾರಿ­ಯ­ಲ್ಲಿರಲಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಔಲು ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಬಿಜೆಡಿ ಹಾಗೂ ಕಾಂಗ್ರೆಸ್‌ ಬೆಂಬಲಿಗರ ನಡುವೆ ಘರ್ಷಣೆ ಉಂಟಾಯಿತು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ನಾರಾಯಣ್ ಬೆಹೆರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT