ಹೊಸಕೋಟೆ: ಪ್ರಧಾನ ಮಂತ್ರಿಗಳ ಜನಧನ ಯೋಜನೆ ಅಡಿ ಗ್ರಾಹಕರು ಬ್ಯಾಂಕುಗಳಲ್ಲಿ ಉಳಿತಾಯ ಖಾತೆ ತೆರೆಯುವ ಅವಧಿಯನ್ನು ಇದೇ 30ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ನ ಮುಖ್ಯ ಪ್ರಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಕುಟುಂಬದವರು ಮನೆಗೆ ಒಂದು ಖಾತೆ ತೆರೆಯುವುದು ಯೋಜನೆಯ ಉದ್ದೇಶವಾಗಿದ್ದು, ಗ್ರಾಹಕರು ಯಾವುದೇ ಬ್ಯಾಂಕ್ನಲ್ಲಿ ಖಾತೆ ತೆರೆಯಬಹುದು ಎಂದು ತಿಳಿಸಿದ್ದಾರೆ.