<p><strong>ಧಾರವಾಡ</strong>: ‘ಸಾಹಿತ್ಯ ಕ್ಷೇತ್ರದ ಪ್ರಾಜ್ಞ ವಲಯವನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪುರಸೊತ್ತಿಲ್ಲದ ಸಂಸ್ಕೃತಿ ಸಚಿವರು ಮತ್ತು ಜನಪ್ರತಿನಿಧಿಗಳು, ಜ್ಞಾನ ಪಡೆಯುವ ಹಾಗೂ ತಾವು ಸುಂಸ್ಕೃತರು ಎಂದು ತೋರಿಸಿಕೊಳ್ಳುವ ಅವಕಾಶದಿಂದ ವಂಚಿತರಾದರು’ ಎಂದು ಹಿರಿಯ ಇತಿಹಾಸಕಾರ ಪ್ರೊ.ಷ.ಶೆಟ್ಟರ್ ಚಾಟಿ ಬೀಸಿದರು.<br /> <br /> ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಶುಕ್ರವಾರ ನಡೆದ ಕರ್ನಾಟಕ ಸಾಹಿತ್ಯ ಅಕಾಡೆಮಿ 2014ರ ಗೌರವ ಪ್ರಶಸ್ತಿ ಹಾಗೂ 2013ರ ಪುಸ್ತಕ ಬಹುಮಾನ ಪ್ರದಾನ ಸಮಾರಂಭದಲ್ಲಿ, ಗೌರವ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.<br /> <br /> ‘ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ₹ 390 ಕೋಟಿ ಅನುದಾನವಿದೆ. ಅದನ್ನು ಕೇವಲ ಒಬ್ಬ ವ್ಯಕ್ತಿ ನಿರ್ವಹಿಸುತ್ತಾನೆ. ಅದಕ್ಕೊಂದು ಸಲಹಾ ಮಂಡಳಿಯಾಗಲಿ, ವಿಮರ್ಶಾ ಮಂಡಳಿಯಾಗಲಿ ಇಲ್ಲ. ಒಂದು ವರ್ಷದ ಅವಧಿಯಲ್ಲಿ ಆರು ಪ್ರಧಾನ ಕಾರ್ಯದರ್ಶಿಗಳು ಬದಲಾಗಿದ್ದಾರೆ.<br /> <br /> ನೇಮಕಗೊಂಡವರು ಅಲ್ಲಿ ಅನಿವಾರ್ಯವಾಗಿ ಕೆಲಸ ಮಾಡುತ್ತಿದ್ದಾರೆ. ಇಂಥ ಇಲಾಖೆ, ಅದರ ಮುಖ್ಯಸ್ಥರು ಮತ್ತು ಜನಪ್ರತಿನಿಧಿಗಳಿಂದ ಏನು ಅಪೇಕ್ಷಿಸಲು ಸಾಧ್ಯ?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ‘ಸರ್ಕಾರದ ಧೋರಣೆ ಖಂಡಿಸಿ ಡಾ.ಜಿ. ರಾಮಕೃಷ್ಣ ಪ್ರಶಸ್ತಿ ನಿರಾಕರಿಸಿದ್ದಾರೆ. ಸಾಹಿತ್ಯ, ಸಂಸ್ಕೃತಿ ನಿರ್ವಹಣೆಗೆ ಅಗತ್ಯ ಮಾರ್ಗಸೂಚಿ ನೀಡಿದ ವರದಿಯನ್ನು ಸರ್ಕಾರ ಉಪೇಕ್ಷಿಸಿದ್ದು ಅವರಿಗೆ ಬೇಸರ ತರಿಸಿದೆ. ಈ ಬಗ್ಗೆ ನಮಗೂ ಬೇಸರವಿದೆ’ ಎಂದರು. <br /> <br /> ಸುಬ್ರಾಯ ಚೊಕ್ಕಾಡಿ, ಪ್ರೊ.ಸುಕನ್ಯಾ ಹಾಗೂ ಸವಿತಾ ನಾಗಭೂಷಣ ಅವರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ನಿರಾಕರಿಸಿದ್ದ ಡಾ. ಜಿ.ರಾಮಕೃಷ್ಣ ಕಾರ್ಯಕ್ರಮಕ್ಕೆ ಗೈರು ಆಗಿದ್ದರು.<br /> <br /> ಪುಸ್ತಕ ಬಹುಮಾನವನ್ನು ಸುಬ್ಬು ಹೊಲೆಯಾರ್, ರಜನಿ ನರಹಳ್ಳಿ, ಎಂ.ಎಸ್.ಶ್ರೀರಾಮ್, ಡಾ.ಕೆ.ವೈ.ನಾರಾಯಣಸ್ವಾಮಿ, ಎಂ.ಡಿ.ಗೋಗೇರಿ, ಡಾ.ಎಚ್.ಎಸ್.ಅನುಪಮಾ, ಕುಪ್ಪೆ ನಾಗರಾಜ, ಪ್ರಭಾಕರ ಆಚಾರ್ಯ, ಹ.ಸ.ಬ್ಯಾಕೋಡ, ಟಿ.ಎಸ್.ಗೋಪಾಲ್, ಎನ್.ಜಗದೀಶ ಕೊಪ್ಪ, ಡಾ.ಬಸವರಾಜ ಕಲ್ಗುಡಿ, ಡಾ.ಆರ್.ಲಕ್ಷ್ಮೀನಾರಾಯಣ, ಡಾ.ಬಿ.ಸುಜ್ಞಾನಮೂರ್ತಿ, ಲಕ್ಷ್ಮೀಶತೋಳ್ಪಾಡಿ, ಬಿ.ಎಸ್.ಶ್ರುತಿ ಅವರಿಗೆ ನೀಡಲಾಯಿತು.<br /> <br /> ಅಕಾಡೆಮಿ ಅಧ್ಯಕ್ಷೆ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ.ವಿಜಯಾ, ಡಾ.ಗಣೇಶ ಎನ್.ದೇವಿ, ಡಾ.ಪಾಟೀಲ ಪುಟ್ಟಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಸಾಹಿತ್ಯ ಕ್ಷೇತ್ರದ ಪ್ರಾಜ್ಞ ವಲಯವನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪುರಸೊತ್ತಿಲ್ಲದ ಸಂಸ್ಕೃತಿ ಸಚಿವರು ಮತ್ತು ಜನಪ್ರತಿನಿಧಿಗಳು, ಜ್ಞಾನ ಪಡೆಯುವ ಹಾಗೂ ತಾವು ಸುಂಸ್ಕೃತರು ಎಂದು ತೋರಿಸಿಕೊಳ್ಳುವ ಅವಕಾಶದಿಂದ ವಂಚಿತರಾದರು’ ಎಂದು ಹಿರಿಯ ಇತಿಹಾಸಕಾರ ಪ್ರೊ.ಷ.ಶೆಟ್ಟರ್ ಚಾಟಿ ಬೀಸಿದರು.<br /> <br /> ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಶುಕ್ರವಾರ ನಡೆದ ಕರ್ನಾಟಕ ಸಾಹಿತ್ಯ ಅಕಾಡೆಮಿ 2014ರ ಗೌರವ ಪ್ರಶಸ್ತಿ ಹಾಗೂ 2013ರ ಪುಸ್ತಕ ಬಹುಮಾನ ಪ್ರದಾನ ಸಮಾರಂಭದಲ್ಲಿ, ಗೌರವ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.<br /> <br /> ‘ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ₹ 390 ಕೋಟಿ ಅನುದಾನವಿದೆ. ಅದನ್ನು ಕೇವಲ ಒಬ್ಬ ವ್ಯಕ್ತಿ ನಿರ್ವಹಿಸುತ್ತಾನೆ. ಅದಕ್ಕೊಂದು ಸಲಹಾ ಮಂಡಳಿಯಾಗಲಿ, ವಿಮರ್ಶಾ ಮಂಡಳಿಯಾಗಲಿ ಇಲ್ಲ. ಒಂದು ವರ್ಷದ ಅವಧಿಯಲ್ಲಿ ಆರು ಪ್ರಧಾನ ಕಾರ್ಯದರ್ಶಿಗಳು ಬದಲಾಗಿದ್ದಾರೆ.<br /> <br /> ನೇಮಕಗೊಂಡವರು ಅಲ್ಲಿ ಅನಿವಾರ್ಯವಾಗಿ ಕೆಲಸ ಮಾಡುತ್ತಿದ್ದಾರೆ. ಇಂಥ ಇಲಾಖೆ, ಅದರ ಮುಖ್ಯಸ್ಥರು ಮತ್ತು ಜನಪ್ರತಿನಿಧಿಗಳಿಂದ ಏನು ಅಪೇಕ್ಷಿಸಲು ಸಾಧ್ಯ?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ‘ಸರ್ಕಾರದ ಧೋರಣೆ ಖಂಡಿಸಿ ಡಾ.ಜಿ. ರಾಮಕೃಷ್ಣ ಪ್ರಶಸ್ತಿ ನಿರಾಕರಿಸಿದ್ದಾರೆ. ಸಾಹಿತ್ಯ, ಸಂಸ್ಕೃತಿ ನಿರ್ವಹಣೆಗೆ ಅಗತ್ಯ ಮಾರ್ಗಸೂಚಿ ನೀಡಿದ ವರದಿಯನ್ನು ಸರ್ಕಾರ ಉಪೇಕ್ಷಿಸಿದ್ದು ಅವರಿಗೆ ಬೇಸರ ತರಿಸಿದೆ. ಈ ಬಗ್ಗೆ ನಮಗೂ ಬೇಸರವಿದೆ’ ಎಂದರು. <br /> <br /> ಸುಬ್ರಾಯ ಚೊಕ್ಕಾಡಿ, ಪ್ರೊ.ಸುಕನ್ಯಾ ಹಾಗೂ ಸವಿತಾ ನಾಗಭೂಷಣ ಅವರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ನಿರಾಕರಿಸಿದ್ದ ಡಾ. ಜಿ.ರಾಮಕೃಷ್ಣ ಕಾರ್ಯಕ್ರಮಕ್ಕೆ ಗೈರು ಆಗಿದ್ದರು.<br /> <br /> ಪುಸ್ತಕ ಬಹುಮಾನವನ್ನು ಸುಬ್ಬು ಹೊಲೆಯಾರ್, ರಜನಿ ನರಹಳ್ಳಿ, ಎಂ.ಎಸ್.ಶ್ರೀರಾಮ್, ಡಾ.ಕೆ.ವೈ.ನಾರಾಯಣಸ್ವಾಮಿ, ಎಂ.ಡಿ.ಗೋಗೇರಿ, ಡಾ.ಎಚ್.ಎಸ್.ಅನುಪಮಾ, ಕುಪ್ಪೆ ನಾಗರಾಜ, ಪ್ರಭಾಕರ ಆಚಾರ್ಯ, ಹ.ಸ.ಬ್ಯಾಕೋಡ, ಟಿ.ಎಸ್.ಗೋಪಾಲ್, ಎನ್.ಜಗದೀಶ ಕೊಪ್ಪ, ಡಾ.ಬಸವರಾಜ ಕಲ್ಗುಡಿ, ಡಾ.ಆರ್.ಲಕ್ಷ್ಮೀನಾರಾಯಣ, ಡಾ.ಬಿ.ಸುಜ್ಞಾನಮೂರ್ತಿ, ಲಕ್ಷ್ಮೀಶತೋಳ್ಪಾಡಿ, ಬಿ.ಎಸ್.ಶ್ರುತಿ ಅವರಿಗೆ ನೀಡಲಾಯಿತು.<br /> <br /> ಅಕಾಡೆಮಿ ಅಧ್ಯಕ್ಷೆ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ.ವಿಜಯಾ, ಡಾ.ಗಣೇಶ ಎನ್.ದೇವಿ, ಡಾ.ಪಾಟೀಲ ಪುಟ್ಟಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>