ಬೆಂಗಳೂರು: ಸಂಬಳ ನೀಡದ ಕಾರಣ ಕಳೆದ ನಾಲ್ಕು ದಿನಗಳಿಂದ ಜಯನಗರ ಪ್ರದೇಶದಲ್ಲಿ ಪೌರಕಾರ್ಮಿಕರು ಕಸ ಎತ್ತಲು ನಿರಾಕರಿಸಿದ್ದು ರಸ್ತೆಗಳಲ್ಲಿ ತ್ಯಾಜ್ಯದ ರಾಶಿ ಬಿದ್ದಿದೆ.
ಜಯನಗರ ಭಾಗದ ಗುತ್ತಿಗೆದಾರರು ಕಳೆದ ಮೂರು ತಿಂಗಳಿಂದ ಕಾರ್ಮಿಕರಿಗೆ ಸಂಬಳ ಬಾಕಿ ಉಳಿಸಿಕೊಂಡಿದ್ದು, ಸ್ವಲ್ಪ ಮೊತ್ತವನ್ನು ಮಾತ್ರ ನೀಡಲಾಗಿದೆ ಎಂದು ದೂರಲಾಗಿದೆ. ಇದರಿಂದ ಸಿಟ್ಟಿಗೆದ್ದ ಕಾರ್ಮಿಕರು ಕಳೆದ ನಾಲ್ಕು ದಿನಗಳಿಂದಪ್ರತಿಭಟನೆ ನಡೆಸುತ್ತಿದ್ದಾರೆ.
ಜಯನಗರ ಶಾಸಕ ಬಿ.ಎನ್. ಜಯಕುಮಾರ್ ಮತ್ತು ನಿವಾಸಿಗಳ ಕಲ್ಯಾಣ ಸಂಘದ ಅಧ್ಯಕ್ಷ ಎನ್.ಕೇಶವ ಕುಮಾರ್ ಈ ಸಂಬಂಧ ಮೇಯರ್ ಬಿ.ಎಸ್. ಸತ್ಯನಾರಾಯಣ ಅವರಿಗೆ ದೂರು ನೀಡಿದ್ದಾರೆ.