ಮಂಗಳವಾರ ಜಾಮೀನು ಅರ್ಜಿಯನ್ನು ವಿಚಾರಣೆ ಕೈಗೆತ್ತಿಕೊಂಡಿದ್ದ ದಸರಾ ರಜಾಕಾಲದ ನ್ಯಾಯಪೀಠ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ನಿಗದಿ ಪಡಿಸಿತ್ತು.
ಆದರೆ ಇದೊಂದು ವಿಶೇಷ ಹಾಗೂ ತುರ್ತು ಪ್ರಕರಣವೆಂದು ಪರಿಗಣಿಸಿ ಅರ್ಜಿಯನ್ನು ತಕ್ಷಣವೇ ವಿಚಾರಣೆ ನಡೆಸಬೇಕು ಎಂದು ಜಯಲಲಿತಾ ಅವರ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರು ನ್ಯಾಯಾಲಯವನ್ನು ಕೋರಿದ್ದರು. ಪರಿಣಾಮವಾಗಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಬುಧವಾರ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು.