ಜಯಲಲಿತಾ ಮತ್ತು ಇತರೆ ಮೂರು ಮಂದಿ ಆಪಾದಿತರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ನೀಡಿತ್ತು. ಶನಿವಾರ ಬೆಳಿಗ್ಗೆ ಜಾಮೀನು ಆದೇಶದ ಪ್ರತಿಯನ್ನು ಪರಿಶೀಲಿಸಿದ ಬೆಂಗಳೂರಿನ ವಿಶೇಷ ನ್ಯಾಯಾಲಯ ಜಯಲಲಿತಾ ಅವರ ಬಿಡುಗಡೆಗೆ ಆದೇಶ ನೀಡಿತ್ತು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಪೊಲೀಸ್ ಭದ್ರತೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣ ತಲುಪಿದ ಜಯಲಲಿತಾ, ವಿಶೇಷ ವಿಮಾನದ ಮೂಲಕ ಚೆನ್ನೈಗೆ ಹೊರಟರು.
ಜಯಲಲಿತಾ ಸಾಗುವ ಮಾರ್ಗದುದ್ದಕ್ಕೂ ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದ ಎಐಎಡಿಎಂಕೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜಯಲಲಿತಾ ಅವರಿದ್ದ ಕಾರಿನ ಮೇಲೆ ಹೂ ಚೆಲ್ಲಿ, ಜಯಕಾರ ಕೂಗಿದರು.