ನವದೆಹಲಿ (ಪಿಟಿಐ): ಬೆಂಗಳೂರಿನ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಜೂನ್ 16ರವರೆಗೆ ವಿಸ್ತರಣೆ ಮಾಡಿದೆ.
ಜೂನ್ 16ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸುವಂತೆ ಪೀಠ ಸೂಚಿಸಿತು. ಅಲ್ಲಿಯವರೆಗೂ ಮಧ್ಯಂತರ ಆದೇಶ ಮುಂದುವರಿಯಲಿದೆ.