ಕುರಾನ್ ಸ್ಟಡಿ ಸರ್ಕಲ್ ಮತ್ತು ಆರ್.ಟಿ.ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
‘ಎಲ್ಲ ಧರ್ಮಗಳ ಸಾರವೂ ಒಂದೆ ಆಗಿದೆ. ಹೀಗಾಗಿ ಎಲ್ಲ ಧರ್ಮಗಳನ್ನು ಗೌರವಿಸಬೇಕು. ಜಾತಿ, ಧರ್ಮಗಳ ನಡುವಿನ ವೈಷಮ್ಯ ಮರೆಯಾಗಬೇಕು. ನಾವೆಲ್ಲಾ ಭಾರತೀಯರು ಎಂಬ ಭಾವನೆ ಬರಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ’ ಎಂದರು.
ವೈದ್ಯೆ ತಹಾ ಮತೀನ ಮಾತನಾಡಿ, ‘ಸಮಾಜದಲ್ಲಿ ಹೆಣ್ಣು ಗಂಡಿನ ನಡುವೆ ತಾರತಮ್ಯ ಹೆಚ್ಚುತ್ತಿದೆ. ಮಹಿಳೆ ಸಹ ಎಲ್ಲ ಕ್ಷೇತ್ರಗಳಲ್ಲಿಯೂ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಹೀಗಾಗಿ ಈ ತಾರತಮ್ಯ ನಿವಾರಣೆಯಾಗಬೇಕು’ ಎಂದರು.