66ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ವಾರ್ತಾ ಮತ್ತು ಪ್ರಸಾರ ಇಲಾಖೆಯು ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳು ಇಲ್ಲದ ಮೂಲ ಸಂವಿಧಾನದ ಪೀಠಿಕೆಯ ಚಿತ್ರವುಳ್ಳ ಜಾಹೀರಾತನ್ನು ಪ್ರಕಟಿಸಿತ್ತು. ಇದನ್ನೇ ಕಾರಣವಾಗಿಟ್ಟುಕೊಂಡು ಶಿವಸೇನೆ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ಪೀಠಿಕೆಯಿಂದ ತೆಗೆದು ಹಾಕಲು ಒತ್ತಾಯಿಸಿತ್ತು.