ಜೂನ್ 9ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ನ್ಯಾಯಾಧೀಶ ಆರ್. ದಕ್ಷಿಣಾಮೂರ್ತಿ ಅವರು ಜಯಲಲಿತಾ ಮತ್ತು ಶಶಿಕಲಾ ಅವರಿಗೆ ಸೂಚಿಸಿದರು.
ಆದಾಯ ತೆರಿಗೆ ಮಾಹಿತಿ ಸಲ್ಲಿಸದ ಇವರಿಬ್ಬರ ವಿರುದ್ಧ ಆದಾಯ ತೆರಿಗೆ ಇಲಾಖೆ ಈಗಾಗಲೇ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು.
ತಮ್ಮ ವಿರುದ್ಧ ದಾಖಲಾಗಿದ್ದ ಆದಾಯ ತೆರಿಗೆ ವಂಚನೆ ಪ್ರಕರಣಗಳ ವಿಚಾರಣೆ ಕೈಬಿಡುವಂತೆ ಕೋರಿ ಜಯಲಲಿತಾ ಹಾಗೂ ಶಶಿಕಲಾ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ತಳ್ಳಿ ಹಾಕಿದ್ದವು. ಪ್ರಕರಣದ ವಿಚಾರಣೆಯನ್ನು 4 ತಿಂಗಳಲ್ಲಿ ಪೂರ್ಣ ಗೊಳಿಸುವಂತೆ ಸುಪ್ರೀಂಕೋರ್ಟ್, ಕೆಳ ಹಂತದ ನ್ಯಾಯಾಲಯಕ್ಕೆ ಸೂಚಿಸಿತ್ತು.