ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್, ಮಾಂಝಿ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಸೋಮವಾರ ಸೂಚಿಸಿದ್ದರು. ಹೊಸ ಸರ್ಕಾರ ರಚನೆಗಾಗಿ ಜೆಡಿಯುದ 117, ಇಬ್ಬರು ಪಕ್ಷೇತರರು, ಹಾಗೂ ಒಬ್ಬ ಸಿಪಿಐ ಸದಸ್ಯ ಸೇರಿದಂತೆ 120 ಬೆಂಬಲಿಗ ಶಾಸಕರ ಹೆಸರುಗಳುಳ್ಳ ಪಟ್ಟಿಯನ್ನು ರಾಜ್ಯಪಾಲರಿಗೆ ನೀಡಿದ್ದರು.