ಮುಂಬೈ (ಪಿಟಿಐ): ಭಾರತೀಯ ಕ್ರಿಕೆಟ್ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರನ್ನು ಹಂಗಾಮಿ ಕೋಚ್ ಆಗಿ ನೇಮಕ ಮಾಡಲಾಗಿದೆ.
ಡಂಕನ್ ಪ್ಲೆಚರ್ ಅವರ ಬಳಿಕ ಭಾರತೀಯ ಕ್ರಿಕೆಟ್ ತಂಡಕ್ಕೆ ತರಬೇತುದಾರರ ನೇಮಕವಾಗಿಲ್ಲ. ಇದೇ 10 ರಿಂದ ಭಾರತ ತಂಡ ಬಾಂಗ್ಲಾ ಪ್ರವಾಸ ಮಾಡುತ್ತಿರುವ ಹಿನ್ನೆಲೆಯಲ್ಲಿ ರವಿಶಾಸ್ತ್ರಿ ಅವರನ್ನು ಮಧ್ಯಂತರ ಕೋಚ್ ಆಗಿ ನೇಮಕ ಮಾಡಿದೆ.
ಕಳೆದ ವಿಶ್ವಕಪ್ನಲ್ಲಿ ರವಿಶಾಸ್ತ್ರಿ ಭಾರತ ತಂಡದ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಬಾಂಗ್ಲಾ ವಿರುದ್ಧ ಭಾರತ ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.
ಸೂಕ್ತ ಕೋಚ್ಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಅನುರಾಗ್ ಠಾಕೂರ್ ತಿಳಿಸಿದ್ದಾರೆ.