ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಕ್ಕಿ ಹತ್ಯೆ: ಶೀಘ್ರವೇ ತಪ್ಪಿತಸ್ಥರ ಬಂಧನ

Last Updated 9 ಜೂನ್ 2014, 19:30 IST
ಅಕ್ಷರ ಗಾತ್ರ

ಪುಣೆ / ಮುಂಬೈ (ಪಿಟಿಐ):  ಸಾಫ್ಟ್‌ವೇರ್‌ ಉದ್ಯೋಗಿ ಮೊಹಸ್ಸೀನ್‌ ಶೇಖ್‌ ಹತ್ಯೆಗೆ ಕಾರಣವಾದ ಚಿತ್ರಗಳನ್ನು ಸಾಮಾಜಿಕ ಜಾಲ­ತಾಣದಲ್ಲಿ ಸೇರಿಸಿ­ದವರನ್ನು  ಗುರುತಿಸ­ಲಾಗಿದ್ದು ಶೀಘ್ರವೇ ಅವರನ್ನು ಬಂಧಿಸ­ಲಾಗುವುದು ಎಂದು ಗೃಹ ಸಚಿವ ಆರ್‌.ಆರ್‌.ಪಾಟೀಲ್‌ ಸೋಮವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ದುರುಪ­ಯೋಗ ಮಾಡಿಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ಪುಣೆ ಪೊಲೀಸರು ಹಿಂದೂ ರಾಷ್ಟ್ರ ಸೇನಾದ ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ರುಚಿ ಘನಶ್ಯಾಂ ನೇಮಕ
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯ­ದರ್ಶಿ ರುಚಿ ಘನಶ್ಯಾಂ ಅವರನ್ನು ದಕ್ಷಿಣ ಆಫ್ರಿಕಾದಲ್ಲಿ ಭಾರತದ ಹೈ ಕಮಿಷನರ್‌ ಆಗಿ ನೇಮಕ ಮಾಡಲಾಗಿದೆ.
ಶೀಘ್ರವೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT