ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ-ಯಲ್ಲಿನ ಪಾದಚಾರಿ ಮಾರ್ಗಗಳಲ್ಲಿರುವ ಎಲ್ಲ ವಿದ್ಯುತ್ ಟ್ರಾನ್ಸ್ಫಾರ್ಮರ್ ಘಟಕಗಳನ್ನು ಒಂದು ವಾರದ ಅವಧಿಯಲ್ಲಿ ತೆರವುಗೊಳಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ.
ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರಿದ್ದ ಪೀಠವು ಗುರುವಾರ ಈ ಸಂಬಂಧ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿತು.
ಪಾದಚಾರಿ ಮಾರ್ಗಗಳಲ್ಲಿ ಹಾಕಲಾಗಿರುವ ಟ್ರಾನ್ಸ್ಫಾರ್ಮರ್ಗಳ ಸಂಪೂರ್ಣ ವಿವರವನ್ನು ಸೋಮವಾರ (ಜುಲೈ 28) ಒದಗಿಸುವಂತೆಯೂ ಪೀಠವು ಸೂಚಿಸಿತು.
2013ರ ಮೇ ತಿಂಗಳ 18ರಂದು ಚರ್ಚ್ ಸ್ಟ್ರೀಟ್ನಲ್ಲಿ ಮನೋಜ್ ಪಾಟೀಲ್ ಎಂಬುವವರು ವಿದ್ಯುತ್ ಸಂಪರ್ಕದಿಂದ ಮೃತಪಟ್ಟಿದ್ದರು. ಈ ಕಾರಣದಿಂದ ಇವರ ಪತ್ನಿ ಅಶ್ವಿನಿ ಮನೋಜ್ ಪಾಟೀಲ್ ₨ 29 ಕೋಟಿ ಪರಿಹಾರ ಕೇಳಿ ಬೆಸ್ಕಾಂ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದಾರೆ.