ಜಗಳೂರು: ಸಾಹಿತಿ ಹಾಗೂ ಇಲ್ಲಿನ ಅಮರಭಾರತಿ ವಿದ್ಯಾಕೇಂದ್ರದ ಸಂಸ್ಥಾಪಕ ಡಾ.ಟಿ.ತಿಪ್ಪೇಸ್ವಾಮಿ (77) ಬುಧವಾರ ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರು.
ಅವರಿಗೆ ಪತ್ನಿ, ಮಗ, ಇಬ್ಬರು ಪುತ್ರಿಯರು, ಮಾಜಿ ಶಾಸಕರೂ ಆದ ಸಹೋದರ ಟಿ. ಗುರುಸಿದ್ದನಗೌಡ ಇದ್ದಾರೆ.
ಮೃತರ ಅಂತ್ಯಸಂಸ್ಕಾರ ಪಟ್ಟಣದಲ್ಲಿ ಬುಧವಾರ ನಡೆಯಿತು.
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಅನುಯಾಯಿಯಾಗಿದ್ದ ಡಾ.ತಿಪ್ಪೇಸ್ವಾಮಿ, ಲೋಕಶಕ್ತಿ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
ಬರಹಗಾರರಾಗಿಯೂ ಗುರುತಿಸಿಕೊಂಡಿದ್ದ ಅವರು ದಾವಣಗೆರೆಯಲ್ಲಿ ಎರಡು ವರ್ಷ ಹಿಂದೆ ನಡೆದ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾಗಿ ಹಾಗೂ ಜಗಳೂರು ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.