ಶಿವಮೊಗ್ಗ: ನಗರದ ಕರ್ನಾಟಕ ಸಂಘದ ವತಿಯಿಂದ ಜೀವಮಾನ ಸಾಧನೆಗಾಗಿ ನೀಡಲಾಗುವ ಪ್ರೊ.ತೀ.ನಂ. ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿಯನ್ನು ಹೆಸರಾಂತ ವಿಮರ್ಶಕ ಡಾ.ಸಿ.ಎನ್. ರಾಮಚಂದ್ರನ್ ಅವರಿಗೆ, ಡಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು ಕವಿ, ನಾಟಕಕಾರ ಪ್ರೊ. ಸತ್ಯನಾರಾಯಣ ರಾವ್ ಅಣತಿ ಅವರಿಗೆ ಪ್ರಕಟಿಸಲಾಗಿದೆ.
ಏ. 23ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ ₹ 25 ಸಾವಿರ ನಗದು, ಸ್ಮರಣಿಕೆ ಹೊಂದಿದೆ. ಪ್ರಶಸ್ತಿ ಪುರಸ್ಕೃತರನ್ನು ಕುರಿತು ಮೈಸೂರಿನ ವಿಶ್ರಾಂತ ಪ್ರಾಧ್ಯಾಪಕ ಡಾ.ಯು.ಎಚ್. ಗಣೇಶ್, ವಿಮರ್ಶಕ ಪ್ರೊ.ಟಿ.ಪಿ.ಅಶೋಕ ಮಾತನಾಡಲಿದ್ದಾರೆ. ಸಂಘದ ಅಧ್ಯಕ್ಷ ಪ್ರೊ.ಡಿ.ಎಸ್.ಮಂಜುನಾಥ್ ಅಧ್ಯಕ್ಷತೆ ವಹಿಸುವರು.