<p><strong>ಬೆಂಗಳೂರು:</strong> ಪ್ರಸಕ್ತ ಸಾಲಿನ ‘ಕನಕಶ್ರೀ’ ಪ್ರಶಸ್ತಿಗೆ ವಿಜಾಪುರದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.<br /> ದಾಸ ಸಾಹಿತ್ಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಹಾಗೂ ಅನನ್ಯ ಕೊಡುಗೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನಕಶ್ರೀ’ ಪ್ರಶಸ್ತಿಯನ್ನು ನೀಡುತ್ತಿದೆ.<br /> <br /> ಕಾ.ತ. ಚಿಕ್ಕಣ್ಣ ಅವರ ಅಧ್ಯಕ್ಷತೆಯ ಪ್ರಶಸ್ತಿ ಆಯ್ಕೆ ಸಮಿತಿ ಡಾ. ಕುಲಕರ್ಣಿ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.<br /> <br /> ‘ತಾರ್ ಮಾಸ್ತರ’ ಎಂದೇ ಜನಪ್ರಿಯರಾಗಿರುವ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಗಮಕದ ಮೂಲಕ ದಾಸ ಸಾಹಿತ್ಯದ ಪ್ರಸಾರ ಕಾರ್ಯ ಮಾಡಿದ್ದಾರೆ ಮತ್ತು 50ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ.<br /> <br /> ಪ್ರಶಸ್ತಿಯು ರೂ 5 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ನ. 20ರಂದು ಸಂಜೆ 6ಕ್ಕೆ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಸಕ್ತ ಸಾಲಿನ ‘ಕನಕಶ್ರೀ’ ಪ್ರಶಸ್ತಿಗೆ ವಿಜಾಪುರದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.<br /> ದಾಸ ಸಾಹಿತ್ಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಹಾಗೂ ಅನನ್ಯ ಕೊಡುಗೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನಕಶ್ರೀ’ ಪ್ರಶಸ್ತಿಯನ್ನು ನೀಡುತ್ತಿದೆ.<br /> <br /> ಕಾ.ತ. ಚಿಕ್ಕಣ್ಣ ಅವರ ಅಧ್ಯಕ್ಷತೆಯ ಪ್ರಶಸ್ತಿ ಆಯ್ಕೆ ಸಮಿತಿ ಡಾ. ಕುಲಕರ್ಣಿ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.<br /> <br /> ‘ತಾರ್ ಮಾಸ್ತರ’ ಎಂದೇ ಜನಪ್ರಿಯರಾಗಿರುವ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಗಮಕದ ಮೂಲಕ ದಾಸ ಸಾಹಿತ್ಯದ ಪ್ರಸಾರ ಕಾರ್ಯ ಮಾಡಿದ್ದಾರೆ ಮತ್ತು 50ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ.<br /> <br /> ಪ್ರಶಸ್ತಿಯು ರೂ 5 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ನ. 20ರಂದು ಸಂಜೆ 6ಕ್ಕೆ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>