ಚೆನೈ(ಪಿಟಿಐ): ಡಿಎಂಕೆ ಹಿರಿಯ ಮುಖಂಡ ಎಂ ಕರುಣಾನಿಧಿ ಅವರ 92ನೇ ಹುಟ್ಟುಹಬ್ಬವನ್ನು 92ಕೆಜಿ ತೂಕದ ಕೇಕ್ ಕತ್ತರಿಸಿ, ಪಾರಿವಾಳ ಹಾರಿಸುವ ಮೂಲಕ ಪಕ್ಷದ ಕಾರ್ಯಕರ್ತರೊಂದಿಗೆ ಆಚರಿಸಿದರು.
ಕರುಣಾನಿಧಿ ಅವರು ಡಿಎಂಕೆ ಸ್ಥಾಪಕ ಸಿ.ಎನ್ ಅಣ್ಣಾದೊರೈ ಹಾಗೂ ಮತ್ತೊಬ್ಬ ನಾಯಕ ವಿ. ರಾಮಸ್ವಾಮಿ ಪೆರಿಯಾರ್ ಅವರ ಸಮಾಧಿ ಸ್ಥಳಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದರು.
ಐದು ಬಾರಿ ಮುಖ್ಯಮಂತ್ರಿಯಾಗಿದ್ದ ನಂತರ, ಪಕ್ಷದ ಪ್ರಧಾನ ಕಚೇರಿಯಲ್ಲಿ ಡಿಎಂಕೆ ಕಾರ್ಯಕರ್ತರು ಭೇಟಿ ಮಾಡಿ ಶುಭಕೋರಿದರು.
ಪಕ್ಷದ ಕಾರ್ಯಕರ್ತರು ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದರು.