<p><strong>ಮಡಿಕೇರಿ:</strong> ‘ಸಮ್ಮೇಳನದ ಅಧ್ಯಕ್ಷರ ಭಾಷಣವನ್ನು ಸಂಕ್ಷಿಪ್ತಗೊಳಿಸುವಂತೆ ಸೂಚಿಸಿದ್ದರಿಂದ ಅವಮಾನವಾಗಿದೆ ಎಂದು ಅವರು ಭಾವಿಸಿದ್ದರೆ ಅದಕ್ಕೆ ನಾನು ನಾ. ಡಿಸೋಜ ಅವರಲ್ಲಿ ಬೇಷರತ್ ಕ್ಷಮೆ ಯಾಚಿಸುತ್ತೇನೆ' ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದರು.<br /> <br /> 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನದ ಕೊನೆಯ ದಿನವಾದ ಗುರುವಾರ, ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೊದಲ ದಿನ ಸಮಯದ ಕೊರತೆ ಇತ್ತು. ಸಭಿಕರು ಹಸಿದಿದ್ದರು. ಹೀಗಾಗಿ ಭಾಷಣ ಸಂಕ್ಷಿಪ್ತಗೊಳಿಸುವಂತೆ ಸೂಕ್ಷ್ಮವಾಗಿ ತಿಳಿಸಿದೆವು’ ಎಂದು ವಿವರಣೆ ನೀಡಿದರು.<br /> <br /> ‘ಸಮ್ಮೇಳನಾಧ್ಯಕ್ಷರ ಭಾಷಣವನ್ನು ಯಾವಾಗ ಮತ್ತು ಹೇಗೆ ನಿಗದಿಪಡಿಸಬೇಕು ಎಂಬ ಬಗ್ಗೆ ಯೋಚಿಸುವ ಪಾಠವನ್ನು ಈ ಪ್ರಸಂಗ ಕಲಿಸಿದೆ ಎಂದರು.<br /> <br /> <strong>ಶಾಸಕರ ವರ್ತನೆಗೆ ಆಕ್ಷೇಪ: </strong>ಡಾ. ಕಸ್ತೂರಿ ರಂಗನ್ ವರದಿ ಕುರಿತು ಡಿಸೋಜ ಅವರು ಅಧ್ಯಕ್ಷ ಭಾಷಣದಲ್ಲಿ ಏನು ಹೇಳಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳದೆ ಸ್ಥಳೀಯ ಶಾಸಕರು ವೇದಿಕೆ ಏರಿ ಆಕ್ರೋಶ ವ್ಯಕ್ತಪಡಿಸಿದ್ದು ಸರಿಯಲ್ಲ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಅವರು ಹಾಗೆ ಮಾಡಿರುವಂತಿದೆ. ಈ ಕುರಿತು ಶಾಸಕರು ವಿಷಾದ ವ್ಯಕ್ತಪಡಿಸುತ್ತಾರೆ ಎಂದು ಭಾವಿಸುವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಕೊಡಗಿನ ಸಮಸ್ಯೆಗಳ ಬಗ್ಗೆ ಈ ಸಮ್ಮೇಳನ ಪ್ರಭುತ್ವದ ಗಮನ ಸೆಳೆದಿದೆ. ಅವುಗಳಲ್ಲಿ ಕೆಲವಕ್ಕಾದರೂ ಪರಿಹಾರ ದೊರೆತರೆ ಸಮ್ಮೇಳನ ಸಾರ್ಥಕವಾದಂತೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ಸಮ್ಮೇಳನದ ಅಧ್ಯಕ್ಷರ ಭಾಷಣವನ್ನು ಸಂಕ್ಷಿಪ್ತಗೊಳಿಸುವಂತೆ ಸೂಚಿಸಿದ್ದರಿಂದ ಅವಮಾನವಾಗಿದೆ ಎಂದು ಅವರು ಭಾವಿಸಿದ್ದರೆ ಅದಕ್ಕೆ ನಾನು ನಾ. ಡಿಸೋಜ ಅವರಲ್ಲಿ ಬೇಷರತ್ ಕ್ಷಮೆ ಯಾಚಿಸುತ್ತೇನೆ' ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದರು.<br /> <br /> 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನದ ಕೊನೆಯ ದಿನವಾದ ಗುರುವಾರ, ಮಾಧ್ಯಮ ಕೇಂದ್ರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೊದಲ ದಿನ ಸಮಯದ ಕೊರತೆ ಇತ್ತು. ಸಭಿಕರು ಹಸಿದಿದ್ದರು. ಹೀಗಾಗಿ ಭಾಷಣ ಸಂಕ್ಷಿಪ್ತಗೊಳಿಸುವಂತೆ ಸೂಕ್ಷ್ಮವಾಗಿ ತಿಳಿಸಿದೆವು’ ಎಂದು ವಿವರಣೆ ನೀಡಿದರು.<br /> <br /> ‘ಸಮ್ಮೇಳನಾಧ್ಯಕ್ಷರ ಭಾಷಣವನ್ನು ಯಾವಾಗ ಮತ್ತು ಹೇಗೆ ನಿಗದಿಪಡಿಸಬೇಕು ಎಂಬ ಬಗ್ಗೆ ಯೋಚಿಸುವ ಪಾಠವನ್ನು ಈ ಪ್ರಸಂಗ ಕಲಿಸಿದೆ ಎಂದರು.<br /> <br /> <strong>ಶಾಸಕರ ವರ್ತನೆಗೆ ಆಕ್ಷೇಪ: </strong>ಡಾ. ಕಸ್ತೂರಿ ರಂಗನ್ ವರದಿ ಕುರಿತು ಡಿಸೋಜ ಅವರು ಅಧ್ಯಕ್ಷ ಭಾಷಣದಲ್ಲಿ ಏನು ಹೇಳಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳದೆ ಸ್ಥಳೀಯ ಶಾಸಕರು ವೇದಿಕೆ ಏರಿ ಆಕ್ರೋಶ ವ್ಯಕ್ತಪಡಿಸಿದ್ದು ಸರಿಯಲ್ಲ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಅವರು ಹಾಗೆ ಮಾಡಿರುವಂತಿದೆ. ಈ ಕುರಿತು ಶಾಸಕರು ವಿಷಾದ ವ್ಯಕ್ತಪಡಿಸುತ್ತಾರೆ ಎಂದು ಭಾವಿಸುವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಕೊಡಗಿನ ಸಮಸ್ಯೆಗಳ ಬಗ್ಗೆ ಈ ಸಮ್ಮೇಳನ ಪ್ರಭುತ್ವದ ಗಮನ ಸೆಳೆದಿದೆ. ಅವುಗಳಲ್ಲಿ ಕೆಲವಕ್ಕಾದರೂ ಪರಿಹಾರ ದೊರೆತರೆ ಸಮ್ಮೇಳನ ಸಾರ್ಥಕವಾದಂತೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>