ಹೊಸಕೋಟೆ: ‘ಡೆಂಗಿ ಜ್ವರ ಬರದಂತೆ ತಡೆಗಟ್ಟಲು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ ಕುಮಾರ್ ಹೇಳಿದರು.
ಡೆಂಗಿ ನಿಯಂತ್ರಣ ದಿನಾಚರಣೆ ಅಂಗವಾಗಿ ಶುಕ್ರವಾರ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈಡಿಸ್ ಈಜಿಪ್ಟಿ ಸೊಳ್ಳೆಗಳ ಕಡಿತದಿಂದ ಡೆಂಗಿ ಬರುತ್ತದೆ. ಆದ್ದರಿಂದ ಈ ಸೊಳ್ಳೆಗಳ ನಾಶಕ್ಕೆ ಮುಂದಾಗಬೇಕಿದೆ. ಈ ಸೊಳ್ಳೆಗಳ ಉತ್ಪತ್ತಿಗೆ ಜೂನ್ ತಿಂಗಳಲ್ಲಿ ಪೂರಕ ವಾತಾವರಣ ಇರುತ್ತದೆ. ಹೀಗಾಗಿ ಮನೆಯ ಸುತ್ತ ಸ್ವಚ್ಛ ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದರು.