ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಕರಾರು ಅರ್ಜಿ ವಜಾ

Last Updated 16 ಏಪ್ರಿಲ್ 2014, 19:59 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಿಧಾನಸಭೆಗೆ 2013ರಲ್ಲಿ ನಡೆದ ಚುನಾವಣೆ ವೇಳೆ ಟಿ. ನರಸೀಪುರ ಕ್ಷೇತ್ರದ ಮತ ಎಣಿಕೆ ಕ್ರಮಬದ್ಧವಾಗಿ ನಡೆದಿಲ್ಲ ಎಂದು ದೂರಿ ಪರಾಜಿತ ಅಭ್ಯರ್ಥಿ, ಜೆಡಿಎಸ್‌ನ ಎಂ.ಸಿ. ಸುಂದರೇಶನ್‌ ಸಲ್ಲಿಸಿದ್ದ ಚುನಾ­ವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.

‘ಆ ಕ್ಷೇತ್ರದ ಮತಗಳ ಮರು ಎಣಿಕೆಗೆ ಆದೇಶಿಸಬೇಕು’ ಎಂದು ಸುಂದರೇಶನ್‌ ಅರ್ಜಿಯಲ್ಲಿ ಕೋರಿದ್ದರು. ಅರ್ಜಿ­ಯನ್ನು ವಜಾಗೊಳಿಸಬೇಕು ಎಂದು ಕೋರಿ ವಿಜೇತ ಅಭ್ಯರ್ಥಿ, ಕಾಂಗ್ರೆಸ್ಸಿನ ಡಾ.ಎಚ್‌.ಸಿ. ಮಹದೇವಪ್ಪ ಅವರು ಮಧ್ಯಾಂತರ ಅರ್ಜಿ ಸಲ್ಲಿಸಿ­ದ್ದರು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು ಮಧ್ಯಾಂತರ ಅರ್ಜಿ ಮಾನ್ಯ ಮಾಡಿ, ಸುಂದರೇಶನ್‌ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿ ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT