ನವದೆಹಲಿ: ದೇಶದ ಮೊದಲ ಲೋಕಪಾಲರನ್ನು ನೇಮಕ ಮಾಡಲು ಯುಪಿಎ–2 ಸರ್ಕಾರ ಬಹುಶಃ ಕೊನೆಯ ಪ್ರಯತ್ನಕ್ಕೆ ಕೈ ಹಾಕಿದೆ. ಈ ನಿಟ್ಟಿನಲ್ಲಿ ಶೋಧನಾ ಸಮಿತಿ ರಚಿಸಲು ಇದೇ 24 ಮತ್ತು 28ರಂದು ಸಭೆ ಕರೆದಿದೆ. ಆದರೆ, ಇದನ್ನು ತಡೆಯಲು ಸುಪ್ರೀಂ ಕೋರ್ಟ್ನಲ್ಲಿ ಗುರುವಾರ ಅರ್ಜಿ ಸಲ್ಲಿಕೆಯಾಗಿದೆ.
ಲೋಕಪಾಲರು ಮತ್ತು ಅದರ ಸದಸ್ಯರ ನೇಮಕಕ್ಕೆ ಶೋಧನಾ ಸಮಿತಿ ರಚನೆಯ ಆಯ್ಕೆ ಸಮಿತಿ ಸದಸ್ಯರಿಗೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಈ ಕುರಿತು ಇದೇ 11ರಂದು ಪತ್ರ ಬರೆದಿದ್ದಾರೆ.
ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆ 2014ರಲ್ಲಿ ಉಲ್ಲೇಖಿವಾಗಿರುವ ನಿಯಮಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿರುವ ‘ಕಾಮನ್ ಕಾಸ್’ ಸ್ವಯಂ ಸೇವಾ ಸಂಸ್ಥೆ (ಎನ್ಜಿಒ), ಈಗ ಲೋಕಪಾಲರ ನೇಮಕಾತಿಗೆ ಶೋಧನಾ ಸಮಿತಿ ರಚಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಈ ಅರ್ಜಿ ಸಲ್ಲಿಸಿದೆ.