ಬೆಂಗಳೂರು: ‘ಯುವಕರು ಗಾಂಧೀಜಿ ಯವರ ಪುಸ್ತಕಗಳನ್ನು ಓದುವುದರ ಮೂಲಕ ಅವರ ತತ್ವ ಮತ್ತು ಆದ ರ್ಶಗಳನ್ನು ಮೈಗೂಡಿಸಿಕೊಂಡು ಸುಸಂ ಸ್ಕೃತ ವ್ಯಕ್ತಿಗಳಾಗಿ ಬದುಕಬೇಕು’ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಹೊ.ಶ್ರೀನಿವಾಸಯ್ಯ ಹೇಳಿದರು.
ಜ್ಞಾನಭಾರತಿ ಆವರಣದ ಎನ್ಎಸ್ ಎಸ್ ಭವನದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ವಿವಿ ಕುಲಪತಿ ಡಾ.ಬಿ.ತಿಮ್ಮೆಗೌಡ ಮಾತನಾಡಿ, ‘ಈ ರೀತಿಯ ಶಿಬಿರಗಳನ್ನು ಆಯೋಜಿಸುವ ಮೂಲಕ ಎನ್ಎಸ್ಎಸ್ ಸ್ವಯಂಸೇವಕರು ಅತ್ಯುತ್ತಮ ವಿದ್ಯಾರ್ಥಿಗಳಾಗಿ ಹೊರಹೊಮ್ಮುತ್ತಾರೆ.
ಈ ಒಂದು ಅಂಶವನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಈ ವರ್ಷದಿಂದ ಶೈಕ್ಷಣಿಕ ಪಠ್ಯದಲ್ಲಿ ಪಠ್ಯೇತರ ಚಟವಟಿಕೆ ಗಳಿಗೆ ಗ್ರೇಡಿಂಗ್ ಅಂಕ ನೀಡುವ ಪದ್ಧತಿಯನ್ನು ಜಾರಿಗೆ ತರಲಾಗಿದೆ’ ಎಂದರು. ಶಿಬಿರದಲ್ಲಿ ರಾಷ್ಟ್ರದ ವಿವಿಧ ರಾಜ್ಯಗಳಿಂದ 130 ಎನ್ಎಸ್ಎಸ್ ಸ್ವಯಂಸೇವಕರು ಮತ್ತು 20 ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳು ಭಾಗವಹಿಸಿದ್ದರು.