<p><strong>ನವದೆಹಲಿ (ಪಿಟಿಐ):</strong> ರಾಜ್ಯದೆಲ್ಲೆಡೆ ತಲ್ಲಣ ಸೃಷ್ಟಿಸಿದ್ದ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಕಾಲಮಿತಿಯೊಳಗೆ ನಡೆಸುವಂತೆ ಕೋರಿದ್ದ ಕರ್ನಾಟಕ ಸರ್ಕಾರದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ತಿರಸ್ಕರಿಸಿದೆ.</p>.<p>ಅಲ್ಲದೇ, ನೀಡಿದ ಗಡುವಿನೊಳಗೆ ತನಿಖೆ ಪೂರ್ಣಗೊಳಿಸಬೇಕೆಂಬ ನಿಬಂಧನೆಗಳು ಕಾನೂನಿನಲ್ಲಿ ಇಲ್ಲ ಎಂದು ಸಿಬಿಐ ಹೇಳಿದೆ.</p>.<p>ರವಿ ಸಾವಿನ ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಳ್ಳುವಂತೆ ಕೋರಿದ್ದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಈ ಸಂಬಂಧ ಮಾಹಿತಿಯನ್ನು ಸೋಮವಾರ ಕಳುಹಿಸಲಾಗಿದೆ ಎಂದು ಸಿಬಿಐ ಮೂಲಗಳು ಹೇಳಿವೆ.</p>.<p>ಈ ಸಂಬಂಧ ಮತ್ತೆ ಮನವಿ ಬಂದಲ್ಲಿ ಕರ್ನಾಟಕದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿಸಿರುವ ವಿವಾದಾತ್ಮಕ ಪ್ರಕರಣದ ತನಿಖೆ ನಡೆಸಬೇಕೆ ಅಥವಾ ಬೇಡವೆ ಎಂಬುದರ ಬಗ್ಗೆ ಪರಿಶೀಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<p>ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಕೋರಿತ್ತು. ಆದರೆ ಈ ಸಂಬಂಧ ಕಾನೂನಿನಲ್ಲಿ ನಿರ್ದಿಷ್ಟ ನಿಬಂಧನೆಗಳಿಲ್ಲ ಎನ್ನುತ್ತವೆ ಮೂಲಗಳು.</p>.<p>ಪ್ರಕರಣವನ್ನು ಸಿಬಿಐಗೆ ವಹಿಸುವಾಗ ರಾಜ್ಯ ಸರ್ಕಾರವು ತನಿಖೆ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯ ಸರ್ಕಾರದಿಂದ ಮತ್ತೊಂದು ಸ್ಪಷ್ಟನೆ ಕೋರಿದ್ದೇವೆ ಎಂದೂ ಮೂಲಗಳು ಹೇಳಿವೆ.</p>.<p>ಮಾರ್ಚ್ 16ರಂದು ಬೆಂಗಳೂರಿನಲ್ಲಿ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದ ರವಿ ಪ್ರಕರಣವನ್ನು ಕರ್ನಾಟಕ ಸರ್ಕಾರವು ವಿರೋಧ ಪಕ್ಷಗಳ ವ್ಯಾಪಕ ಧರಣಿ ಹಾಗೂ ಜನರ ಪ್ರತಿಭಟನೆಗೆ ಮಣಿದು ಸಿಬಿಐ ತನಿಖೆಗೆ ವಹಿಸಿತ್ತು.</p>.<p>ಇದಕ್ಕೂ ಮುಂಚೆ, ಕರ್ನಾಟಕ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ರಾಜ್ಯದೆಲ್ಲೆಡೆ ತಲ್ಲಣ ಸೃಷ್ಟಿಸಿದ್ದ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಕಾಲಮಿತಿಯೊಳಗೆ ನಡೆಸುವಂತೆ ಕೋರಿದ್ದ ಕರ್ನಾಟಕ ಸರ್ಕಾರದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ತಿರಸ್ಕರಿಸಿದೆ.</p>.<p>ಅಲ್ಲದೇ, ನೀಡಿದ ಗಡುವಿನೊಳಗೆ ತನಿಖೆ ಪೂರ್ಣಗೊಳಿಸಬೇಕೆಂಬ ನಿಬಂಧನೆಗಳು ಕಾನೂನಿನಲ್ಲಿ ಇಲ್ಲ ಎಂದು ಸಿಬಿಐ ಹೇಳಿದೆ.</p>.<p>ರವಿ ಸಾವಿನ ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಳ್ಳುವಂತೆ ಕೋರಿದ್ದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಈ ಸಂಬಂಧ ಮಾಹಿತಿಯನ್ನು ಸೋಮವಾರ ಕಳುಹಿಸಲಾಗಿದೆ ಎಂದು ಸಿಬಿಐ ಮೂಲಗಳು ಹೇಳಿವೆ.</p>.<p>ಈ ಸಂಬಂಧ ಮತ್ತೆ ಮನವಿ ಬಂದಲ್ಲಿ ಕರ್ನಾಟಕದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿಸಿರುವ ವಿವಾದಾತ್ಮಕ ಪ್ರಕರಣದ ತನಿಖೆ ನಡೆಸಬೇಕೆ ಅಥವಾ ಬೇಡವೆ ಎಂಬುದರ ಬಗ್ಗೆ ಪರಿಶೀಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<p>ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಕೋರಿತ್ತು. ಆದರೆ ಈ ಸಂಬಂಧ ಕಾನೂನಿನಲ್ಲಿ ನಿರ್ದಿಷ್ಟ ನಿಬಂಧನೆಗಳಿಲ್ಲ ಎನ್ನುತ್ತವೆ ಮೂಲಗಳು.</p>.<p>ಪ್ರಕರಣವನ್ನು ಸಿಬಿಐಗೆ ವಹಿಸುವಾಗ ರಾಜ್ಯ ಸರ್ಕಾರವು ತನಿಖೆ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯ ಸರ್ಕಾರದಿಂದ ಮತ್ತೊಂದು ಸ್ಪಷ್ಟನೆ ಕೋರಿದ್ದೇವೆ ಎಂದೂ ಮೂಲಗಳು ಹೇಳಿವೆ.</p>.<p>ಮಾರ್ಚ್ 16ರಂದು ಬೆಂಗಳೂರಿನಲ್ಲಿ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದ ರವಿ ಪ್ರಕರಣವನ್ನು ಕರ್ನಾಟಕ ಸರ್ಕಾರವು ವಿರೋಧ ಪಕ್ಷಗಳ ವ್ಯಾಪಕ ಧರಣಿ ಹಾಗೂ ಜನರ ಪ್ರತಿಭಟನೆಗೆ ಮಣಿದು ಸಿಬಿಐ ತನಿಖೆಗೆ ವಹಿಸಿತ್ತು.</p>.<p>ಇದಕ್ಕೂ ಮುಂಚೆ, ಕರ್ನಾಟಕ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>