ನವದೆಹಲಿ (ಪಿಟಿಐ): ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಕೆ. ಗಂಗೂಲಿ ಅವರ ವಿರುದ್ಧ ಆಕ್ಷೇಪಾರ್ಹ ವರ್ತನೆಯ ಆರೋಪ ಹೊರಿಸಿರುವ ಕಾನೂನು ವಿದ್ಯಾರ್ಥಿನಿ ನಿರಂತರ ಮನವಿಗಳನ್ನು ಮಾಡಿದ್ದರೂ ತನಿಖೆಗೆ ಹಾಜರಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಪ್ರಗತಿ ಬಗ್ಗೆ ಮಾಹಿತಿ ಕೋರಿದ್ದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರಿಗೆ ಬರೆದಿರುವ ಪತ್ರದಲ್ಲಿ ಗೃಹ ಇಲಾಖೆಯು ಈ ಮಾಹಿತಿ ನೀಡಿದೆ.