‘ಮೇಕೆದಾಟು ಯೋಜನೆಯ ವಿಚಾರದಲ್ಲಿ ತಮಿಳುನಾಡಿನ ನಿಲುವು ವಿರೋಧಿಸಿ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಯಲಲಿತಾ ಮತ್ತು ಕರುಣಾನಿಧಿ ಅವರ ಪ್ರತಿಕೃತಿಗಳನ್ನು ದಹಿಸಲಾಗುವುದು’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದ್ದಾರೆ.