<p><strong>ಬೆಂಗಳೂರು: </strong>‘ಈ ನೆಲದ ತಲ್ಲಣಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೇ ಇದ್ದರೆ ಸಾಹಿತಿಯಾಗಲು ಸಾಧ್ಯವಿಲ್ಲ’ ಎಂದು ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಹೇಳಿದರು.<br /> <br /> ‘ಟೋಟೋ ಫಂಡ್ಸ್ ದಿ ಆರ್ಟ್ಸ್’ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ ‘ನಮ್ಮ ಕಾಲದ ಬರಹ‘ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> ‘ಎಲ್ಲಾ ಪಂಥಗಳಿಂದ ಹೊರಗುಳಿದಾಗಲೇ ಸೃಜನಶೀಲತೆಯು ಪಡಿಮೂಡುತ್ತದೆ. ಹಾಗಾಗಿ ಸತತ ಓದು ಮತ್ತು ಬರವಣಿಗೆಯ ಮೂಲಕವೇ ಅಸ್ತಿತ್ವ ಕಾಯ್ದುಕೊಳ್ಳಬೇಕು’ ಎಂದು ಸಲಹೆ ನೀಡಿದರು.<br /> <br /> ಕವಿ ಎಸ್.ಮಂಜುನಾಥ, ‘ನನ್ನ ಸಹಪಾಠಿಯನ್ನು ಹಂಗಿಸುವುದಕ್ಕಾಗಿಯೇ 7ನೇ ತರಗತಿಯಲ್ಲಿ ಕವಿತೆ ಬರೆದೆ. ಅದಕ್ಕಾಗಿ ಶಿಕ್ಷಕರಿಂದ ಪೆಟ್ಟು, ಬೈಗುಳ ತಿಂದೆ. ಕವಿ ಆಗುವುದಲ್ಲ, ಅದೊಂದು ಸ್ಥಿತಿ’ ಎಂದು ಬಣ್ಣಿಸಿದರು.<br /> <br /> ಕವಯತ್ರಿ ಅಕ್ಷತಾ ಹುಂಚದಕಟ್ಟೆ, ‘ಹೆಣ್ಣಿನ ತಲ್ಲಣಗಳನ್ನು ಚಿತ್ರಿಸುವುದರ ಜತೆಗೆ ಅವುಗಳಾಚೆಗೆ ಮುಕ್ತಗೊಳ್ಳುವ ಬಗ್ಗೆ ಸಮಕಾಲೀನ ಲೇಖಕಿಯರು ಮಿಡಿಯುತ್ತಿದ್ದಾರೆ’ ಎಂದು ತಿಳಿಸಿದರು.<br /> <br /> ಕವಿ ಆರಿಫ್ರಾಜ, ‘ಜಾತಿ, ಧರ್ಮದಂತಹ ಸಂಕೀರ್ಣ ವ್ಯವಸ್ಥೆಯಿರುವ ಭಾರತದಂತಹ ದೇಶದಲ್ಲಿ ಕಾವ್ಯ ಸೃಷ್ಟಿಸಲು ವಸ್ತು ಕೊರತೆಯಾಗದು. ಆದರೆ, ಮನುಷ್ಯರ ನಡುವೆ ಇರುವ ಕಂದಕವನ್ನು ಕಾವ್ಯ ಕಟ್ಟುವ ಮೂಲಕವೇ ಮೀರುವ ಪ್ರಯತ್ನವನ್ನು ಮಾಡಬೇಕಿದೆ’ ಎಂದು ತಿಳಿಸಿದರು.<br /> <br /> ಮಂಕಿ ಅಂಡ್ ಮಿ ಬ್ಯಾಂಡ್ (ಸಂಗೀತ) ಅಮೃತ್ರಾಜ್ ಸ್ಟೀಫನ್, ಪೂಜಾ ಜೈನ್ (ಛಾಯಾಚಿತ್ರ), ರೋಹನ್ ಕ್ಷತ್ರಿ (ಇಂಗ್ಲಿಷ್ ಸೃಜನಶೀಲ ಬರವಣಿಗೆ), ಪದ್ಮನಾಭ ಭಟ್ (ಕನ್ನಡ ಸೃಜನಶೀಲ ಬರವಣಿಗೆ) ಕಿಸ್ಲೆ ಹಾಗೂ ಪ್ರಿಯಾಂಕ ಛಾಬ್ರಿಯಾ ( ಸಾಕ್ಷ್ಯಚಿತ್ರ) ಅವರಿಗೆ ರಂಗಕರ್ಮಿ ಅರುಂಧತಿನಾಗ್ ಅವರು ‘ಟೋಟೋ’ ಪ್ರಶಸ್ತಿ ಪ್ರದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಈ ನೆಲದ ತಲ್ಲಣಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೇ ಇದ್ದರೆ ಸಾಹಿತಿಯಾಗಲು ಸಾಧ್ಯವಿಲ್ಲ’ ಎಂದು ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಹೇಳಿದರು.<br /> <br /> ‘ಟೋಟೋ ಫಂಡ್ಸ್ ದಿ ಆರ್ಟ್ಸ್’ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ ‘ನಮ್ಮ ಕಾಲದ ಬರಹ‘ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> ‘ಎಲ್ಲಾ ಪಂಥಗಳಿಂದ ಹೊರಗುಳಿದಾಗಲೇ ಸೃಜನಶೀಲತೆಯು ಪಡಿಮೂಡುತ್ತದೆ. ಹಾಗಾಗಿ ಸತತ ಓದು ಮತ್ತು ಬರವಣಿಗೆಯ ಮೂಲಕವೇ ಅಸ್ತಿತ್ವ ಕಾಯ್ದುಕೊಳ್ಳಬೇಕು’ ಎಂದು ಸಲಹೆ ನೀಡಿದರು.<br /> <br /> ಕವಿ ಎಸ್.ಮಂಜುನಾಥ, ‘ನನ್ನ ಸಹಪಾಠಿಯನ್ನು ಹಂಗಿಸುವುದಕ್ಕಾಗಿಯೇ 7ನೇ ತರಗತಿಯಲ್ಲಿ ಕವಿತೆ ಬರೆದೆ. ಅದಕ್ಕಾಗಿ ಶಿಕ್ಷಕರಿಂದ ಪೆಟ್ಟು, ಬೈಗುಳ ತಿಂದೆ. ಕವಿ ಆಗುವುದಲ್ಲ, ಅದೊಂದು ಸ್ಥಿತಿ’ ಎಂದು ಬಣ್ಣಿಸಿದರು.<br /> <br /> ಕವಯತ್ರಿ ಅಕ್ಷತಾ ಹುಂಚದಕಟ್ಟೆ, ‘ಹೆಣ್ಣಿನ ತಲ್ಲಣಗಳನ್ನು ಚಿತ್ರಿಸುವುದರ ಜತೆಗೆ ಅವುಗಳಾಚೆಗೆ ಮುಕ್ತಗೊಳ್ಳುವ ಬಗ್ಗೆ ಸಮಕಾಲೀನ ಲೇಖಕಿಯರು ಮಿಡಿಯುತ್ತಿದ್ದಾರೆ’ ಎಂದು ತಿಳಿಸಿದರು.<br /> <br /> ಕವಿ ಆರಿಫ್ರಾಜ, ‘ಜಾತಿ, ಧರ್ಮದಂತಹ ಸಂಕೀರ್ಣ ವ್ಯವಸ್ಥೆಯಿರುವ ಭಾರತದಂತಹ ದೇಶದಲ್ಲಿ ಕಾವ್ಯ ಸೃಷ್ಟಿಸಲು ವಸ್ತು ಕೊರತೆಯಾಗದು. ಆದರೆ, ಮನುಷ್ಯರ ನಡುವೆ ಇರುವ ಕಂದಕವನ್ನು ಕಾವ್ಯ ಕಟ್ಟುವ ಮೂಲಕವೇ ಮೀರುವ ಪ್ರಯತ್ನವನ್ನು ಮಾಡಬೇಕಿದೆ’ ಎಂದು ತಿಳಿಸಿದರು.<br /> <br /> ಮಂಕಿ ಅಂಡ್ ಮಿ ಬ್ಯಾಂಡ್ (ಸಂಗೀತ) ಅಮೃತ್ರಾಜ್ ಸ್ಟೀಫನ್, ಪೂಜಾ ಜೈನ್ (ಛಾಯಾಚಿತ್ರ), ರೋಹನ್ ಕ್ಷತ್ರಿ (ಇಂಗ್ಲಿಷ್ ಸೃಜನಶೀಲ ಬರವಣಿಗೆ), ಪದ್ಮನಾಭ ಭಟ್ (ಕನ್ನಡ ಸೃಜನಶೀಲ ಬರವಣಿಗೆ) ಕಿಸ್ಲೆ ಹಾಗೂ ಪ್ರಿಯಾಂಕ ಛಾಬ್ರಿಯಾ ( ಸಾಕ್ಷ್ಯಚಿತ್ರ) ಅವರಿಗೆ ರಂಗಕರ್ಮಿ ಅರುಂಧತಿನಾಗ್ ಅವರು ‘ಟೋಟೋ’ ಪ್ರಶಸ್ತಿ ಪ್ರದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>