<p><strong>ಧಾರವಾಡ: </strong>‘ಮಾತೃಭಾಷಾ ಮಾಧ್ಯಮ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಬುದ್ಧಿಯ ದುರುಪಯೋಗದಂತಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕೈಲಿ ಸುತ್ತಿಗೆ ಹಿಡಿದವರ ಮುಂದೆ ಮಡಿಕೆ ಇಟ್ಟಂತಾಗಿದೆ’ ಎಂದು ಸಾಹಿತಿ ದೇವನೂರ ಮಹಾದೇವ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕರ್ನಾಟಕ ಜನಸಾಹಿತ್ಯ ಸಂಘಟನೆ, ಕೃಷಿ ವಿವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಶನಿವಾರ ಇಲ್ಲಿ ಪ್ರಾರಂಭವಾದ ‘ಶಿಕ್ಷಣದಲ್ಲಿ ಮಾತೃಭಾಷಾ ಮಾಧ್ಯಮ: ರಾಷ್ಟ್ರೀಯ ಚಿಂತನಾ ಶಿಬಿರ’ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ಭಾಷಾ ಅಲ್ಪಸಂಖ್ಯಾತರ ಭಾಷೆಗಳನ್ನು ಮಾತೃಭಾಷೆ ಎಂದು ಸಂವಿಧಾನದಲ್ಲಿ ಕರೆದಿರುವುದನ್ನೇ ನೆಪ ಮಾಡಿಕೊಂಡು ನ್ಯಾಯಾಲಯ ತನ್ನ ಆಟವಾಡಿದೆ. ಅಲ್ಪಸಂಖ್ಯಾತ ಭಾಷಿಕರಿಗೆ ನೀಡಿದ್ದ ರಕ್ಷಣಾ ಆಯುಧದಿಂದಲೇ ಬಹುಭಾಷಿಕರ ಭಾಷೆಗಳ ಕಾಲು ಕತ್ತರಿಸಿರುವುದು ವಿಪರ್ಯಾಸ’ ಎಂದು ವಿಷಾದಿಸಿದರು.<br /> <br /> ಉದ್ಘಾಟನಾ ಭಾಷಣ ಮಾಡಿದ ಭೋಪಾಲದ ಪ್ರೊ.ಅನಿಲ ಸದ್ಗೋಪಾಲ, ‘ಮಾತೃಭಾಷೆ ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಇಟ್ಟಿರುವ ದಿಟ್ಟ ಹೆಜ್ಜೆ ಈ ರಾಷ್ಟ್ರದಲ್ಲಿ ಹೊಸ ಹೋರಾಟಕ್ಕೆ ನಾಂದಿಯಾಗಲಿದೆ’ ಎಂದು ಹೇಳಿದರು.<br /> <br /> ‘ಭಾಷಾ ಚಳವಳಿ, ಮಾತೃಭಾಷಾ ಚಳವಳಿ ಸೇರಿ ಎಲ್ಲಾ ಸುಸ್ಥಿರ ಚಳವಳಿಗಳನ್ನು ಸಮಾನ ಶಿಕ್ಷಣದ ಚಳವಳಿಯೊಂದಿಗೆ ಬೆರೆಸಿ ರೂಪಿಸಿದರೆ ಮಾತ್ರ ಅದು ಯಶಸ್ಸು ಸಾಧ್ಯ’ ಎಂದು ಅಧ್ಯಕ್ಷತೆ ವಹಿಸಿದ್ದ ರಂಗಕರ್ಮಿ ಪ್ರಸನ್ನ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>‘ಮಾತೃಭಾಷಾ ಮಾಧ್ಯಮ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಬುದ್ಧಿಯ ದುರುಪಯೋಗದಂತಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕೈಲಿ ಸುತ್ತಿಗೆ ಹಿಡಿದವರ ಮುಂದೆ ಮಡಿಕೆ ಇಟ್ಟಂತಾಗಿದೆ’ ಎಂದು ಸಾಹಿತಿ ದೇವನೂರ ಮಹಾದೇವ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಕರ್ನಾಟಕ ಜನಸಾಹಿತ್ಯ ಸಂಘಟನೆ, ಕೃಷಿ ವಿವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಶನಿವಾರ ಇಲ್ಲಿ ಪ್ರಾರಂಭವಾದ ‘ಶಿಕ್ಷಣದಲ್ಲಿ ಮಾತೃಭಾಷಾ ಮಾಧ್ಯಮ: ರಾಷ್ಟ್ರೀಯ ಚಿಂತನಾ ಶಿಬಿರ’ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ಭಾಷಾ ಅಲ್ಪಸಂಖ್ಯಾತರ ಭಾಷೆಗಳನ್ನು ಮಾತೃಭಾಷೆ ಎಂದು ಸಂವಿಧಾನದಲ್ಲಿ ಕರೆದಿರುವುದನ್ನೇ ನೆಪ ಮಾಡಿಕೊಂಡು ನ್ಯಾಯಾಲಯ ತನ್ನ ಆಟವಾಡಿದೆ. ಅಲ್ಪಸಂಖ್ಯಾತ ಭಾಷಿಕರಿಗೆ ನೀಡಿದ್ದ ರಕ್ಷಣಾ ಆಯುಧದಿಂದಲೇ ಬಹುಭಾಷಿಕರ ಭಾಷೆಗಳ ಕಾಲು ಕತ್ತರಿಸಿರುವುದು ವಿಪರ್ಯಾಸ’ ಎಂದು ವಿಷಾದಿಸಿದರು.<br /> <br /> ಉದ್ಘಾಟನಾ ಭಾಷಣ ಮಾಡಿದ ಭೋಪಾಲದ ಪ್ರೊ.ಅನಿಲ ಸದ್ಗೋಪಾಲ, ‘ಮಾತೃಭಾಷೆ ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಇಟ್ಟಿರುವ ದಿಟ್ಟ ಹೆಜ್ಜೆ ಈ ರಾಷ್ಟ್ರದಲ್ಲಿ ಹೊಸ ಹೋರಾಟಕ್ಕೆ ನಾಂದಿಯಾಗಲಿದೆ’ ಎಂದು ಹೇಳಿದರು.<br /> <br /> ‘ಭಾಷಾ ಚಳವಳಿ, ಮಾತೃಭಾಷಾ ಚಳವಳಿ ಸೇರಿ ಎಲ್ಲಾ ಸುಸ್ಥಿರ ಚಳವಳಿಗಳನ್ನು ಸಮಾನ ಶಿಕ್ಷಣದ ಚಳವಳಿಯೊಂದಿಗೆ ಬೆರೆಸಿ ರೂಪಿಸಿದರೆ ಮಾತ್ರ ಅದು ಯಶಸ್ಸು ಸಾಧ್ಯ’ ಎಂದು ಅಧ್ಯಕ್ಷತೆ ವಹಿಸಿದ್ದ ರಂಗಕರ್ಮಿ ಪ್ರಸನ್ನ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>