ತೆಲಂಗಾಣ ರಚನೆ ಸಂಬಂಧ ಪರ - ವಿರೋಧ ಅಭಿಪ್ರಾಯಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಯುಪಿಎ ಸಮನ್ವಯ ಸಮಿತಿಯು ಮಂಗಳವಾರ ಸಭೆ ಸೇರಿತ್ತು. ಪ್ರಧಾನಮಂತ್ರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್, ಎನ್ಸಿಪಿ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ರಾಷ್ಟ್ರೀಯ ಲೋಕ ದಳ ಪಾಲ್ಗೊಂಡಿದ್ದವು. ಈ ಸಭೆಯಲ್ಲಿ ಆಂಧ್ರ ವಿಭಜನೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ಈ ಮಧ್ಯೆ ಬುಧವಾರ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಇದರಲ್ಲಿ ತೆಲಂಗಾಣ ರಾಜ್ಯ ರಚನೆ ವಿಷಯವೇ ಪ್ರಧಾನವಾಗಿ ಚರ್ಚೆಗೆ ಬರಲಿದೆ ಎಂದು ಮೂಲಗಳು ಖಚಿತಪಡಿಸಿವೆ. ಅಧಿಕೃತವಾಗಿ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತೆಲಂಗಾಣಕ್ಕೆ ಅಸ್ತು ಎನ್ನುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗ ತೊಡಗಿವೆ.