ಹೈದರಾಬಾದ್ (ಪಿಟಿಐ): ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮಂಗಳವಾರ ಸಂಪುಟ ವಿಸ್ತರಣೆ ಮಾಡಿದ್ದಾರೆ. ಬೇರೆ ಪಕ್ಷದಿಂದ ಟಿಆರ್ಎಸ್ಗೆ ಸೇರ್ಪಡೆ ಆಗಿರುವ ಮೂವರು ಸೇರಿದಂತೆ ಒಟ್ಟು ಆರು ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ತೆಲಗು ದೇಶಂ ಪಕ್ಷದ ಶ್ರೀನಿವಾಸ್ ಯಾದವ್ ಸಂಪುಟ ಸೇರುವುದಕ್ಕೂ ಮುನ್ನ ಪಕ್ಷಕ್ಕೆ ರಾಜೀನಾಮೆ ನೀಡಿದರು. ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಂಪುಟದಲ್ಲಿ ಯಾದವ್ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.