ನವದೆಹಲಿ: ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ತೆಲಂಗಾಣ ಸಲ್ಲಿಸಿದ್ದ ಮೇಲ್ಮನವಿ ವಿರುದ್ಧ ಕರ್ನಾಟಕ ಸುಪ್ರೀಂಕೋರ್ಟ್ನಲ್ಲಿ ಆಕ್ಷೇಪಣಾ ಅರ್ಜಿ ಸಲ್ಲಿಸಿದೆ.
ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಫಾಲಿ ಎಸ್. ನಾರಿಮನ್, ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ ಐತೀರ್ಪು ಅಂತಿಮವಾಗಿದ್ದು, ಪ್ರಕರಣವನ್ನು ಪುನಃ ವಿಚಾರಣೆಗೆ ಕೈಗೆತ್ತಿಕೊಳ್ಳದಂತೆ ಮನವಿ ಮಾಡಿದರು. ನ್ಯಾಯಮಂಡಳಿ ಆದೇಶ ತೆಲಂಗಾಣದ ಹಿತಾಸಕ್ತಿಗಣನೆಗೆ ತೆಗೆದುಕೊಂಡಿಲ್ಲ. ಮೇಲಾಗಿ ನ್ಯಾಯಮಂಡಳಿಯ ಆದೇಶವನ್ನು ಇದೂವರೆಗೂ ಗೆಜೆಟ್ ಪ್ರಕಟಿಸಿಲ್ಲ. ಹೀಗಾಗಿ ಹೊಸದಾಗಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ತೆಲಂ ಗಾಣ ವಕೀಲರು ವಾದ ಮುಂದಿಟ್ಟರು.
ಫೆಬ್ರುವರಿ 11ರಂದು ವಾದ, ವಿವಾದ ಆಲಿಸಲು ಒಪ್ಪಿಕೊಂಡ ನ್ಯಾಯಾಲಯವು ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶಕ್ಕೆ ನೋಟಿಸ್ ನೀಡಿದೆ.