<p>ಬೆಂಗಳೂರು: ‘ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ನೆನಪಿಗಾಗಿ ಮುಂದಿನ ವರ್ಷ ಮೂಡುಬಿದಿರೆಯಲ್ಲಿ ಆರ್ಕಿಡ್ ಸಂಶೋಧನಾ ಕೇಂದ್ರವನ್ನು ತೆರೆಯಲಾಗುವುದು’ ಎಂದು ಭಾರತ ಯಾತ್ರಾ ಕೇಂದ್ರದ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದರು.<br /> <br /> ಮಂಗಳವಾರ ನಗರದಲ್ಲಿ ತೇಜಸ್ವಿ ಅವರ 77ನೇ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ‘ಪೂರ್ಣಚಂದ್ರ ತೇಜಸ್ವಿ 77’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ತೇಜಸ್ವಿಯವರ ವಿಚಾರಧಾರೆಗಳು ಸಂಶೋಧಕರಿಗೆ ದಾರಿ ತೋರಿಸುವ ಕೈಪಿಡಿಯಾಗಿವೆ. ಅವರ ದಾರಿಯಲ್ಲಿ ಪರಿಸರದ ಕುರಿತು ಸಂಶೋಧನೆ ಕೈಗೊಳ್ಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಸಂಶೋಧನಾ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.<br /> <br /> ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, ‘ತೇಜಸ್ವಿಯವರ ಕರ್ವಾಲೊ ಕೃತಿಯು ಪ್ರತಿವರ್ಷ ಒಂದಲ್ಲ ಒಂದು ವಿಶ್ವವಿದ್ಯಾಲಯದ ವರ್ತಮಾನದ ಪ್ರಶ್ನೆಗಳನ್ನು ಎತ್ತುವ ಶ್ರೇಷ್ಠ ಕೃತಿ ಅದಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ಕಾರ್ಯಕ್ರಮದ ನಂತರ ರೂಪಾಂತರ ರಂಗತಂಡ ತೇಜಸ್ವಿ ಕೃತಿ ಆಧಾರಿತ ‘ಕರ್ವಾಲೊ’ ನಾಟಕ ಪ್ರದರ್ಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ನೆನಪಿಗಾಗಿ ಮುಂದಿನ ವರ್ಷ ಮೂಡುಬಿದಿರೆಯಲ್ಲಿ ಆರ್ಕಿಡ್ ಸಂಶೋಧನಾ ಕೇಂದ್ರವನ್ನು ತೆರೆಯಲಾಗುವುದು’ ಎಂದು ಭಾರತ ಯಾತ್ರಾ ಕೇಂದ್ರದ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದರು.<br /> <br /> ಮಂಗಳವಾರ ನಗರದಲ್ಲಿ ತೇಜಸ್ವಿ ಅವರ 77ನೇ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ‘ಪೂರ್ಣಚಂದ್ರ ತೇಜಸ್ವಿ 77’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ‘ತೇಜಸ್ವಿಯವರ ವಿಚಾರಧಾರೆಗಳು ಸಂಶೋಧಕರಿಗೆ ದಾರಿ ತೋರಿಸುವ ಕೈಪಿಡಿಯಾಗಿವೆ. ಅವರ ದಾರಿಯಲ್ಲಿ ಪರಿಸರದ ಕುರಿತು ಸಂಶೋಧನೆ ಕೈಗೊಳ್ಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಸಂಶೋಧನಾ ಕೇಂದ್ರವನ್ನು ಸ್ಥಾಪನೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.<br /> <br /> ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, ‘ತೇಜಸ್ವಿಯವರ ಕರ್ವಾಲೊ ಕೃತಿಯು ಪ್ರತಿವರ್ಷ ಒಂದಲ್ಲ ಒಂದು ವಿಶ್ವವಿದ್ಯಾಲಯದ ವರ್ತಮಾನದ ಪ್ರಶ್ನೆಗಳನ್ನು ಎತ್ತುವ ಶ್ರೇಷ್ಠ ಕೃತಿ ಅದಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ಕಾರ್ಯಕ್ರಮದ ನಂತರ ರೂಪಾಂತರ ರಂಗತಂಡ ತೇಜಸ್ವಿ ಕೃತಿ ಆಧಾರಿತ ‘ಕರ್ವಾಲೊ’ ನಾಟಕ ಪ್ರದರ್ಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>