ಇರಾಕ್ನಲ್ಲಿ ಬಿಕ್ಕಟ್ಟು ಮುಂದುವರಿದಿರುವುದು ನಿಜಕ್ಕೂ ಆತಂಕಕಾರಿ ಸಂಗತಿ. ಆದರೆ, ಇರಾಕ್ನ ಈಶಾನ್ಯ ಭಾಗದಲ್ಲಿ ಉಗ್ರರ ದಾಳಿ ನಡೆಯುತ್ತಿದೆ. ಹೆಚ್ಚಿನ ತೈಲ ಬಾವಿಗಳು ದಕ್ಷಿಣ ಭಾಗದಲ್ಲಿವೆ. ಹೀಗಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗದು ಎಂದು ರಕ್ಷಣಾ ಖಾತೆಯ ರಾಜ್ಯ ಸಚಿವ ರಾವ್ ಇಂದ್ರಜಿತ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಇರಾಕ್ ಬಿಕ್ಕಟ್ಟಿನಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಲಿದೆ ಎಂಬ ವಿಶ್ಲೇಷಣೆ ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಕಳೆದೆರಡು ವಾರಗಳಿಂದ ಅಸ್ಥಿರತೆ ಮೂಡಿಸಿದೆ.