ಕೂಡಲೇ ಸಿಬ್ಬಂದಿ ಆ ಸ್ಥಳಕ್ಕೆ ಸಮೀಪದ ಜಂಕ್ಷನ್ನಲ್ಲಿರುವ ಪೊಲೀಸರಿಗೆ ಮಾಹಿತಿ ರವಾನಿಸುತ್ತಾರೆ. ನಂತರ ಅವರು ಸ್ಥಳಕ್ಕೆ ಹೋಗಿ ಸಂಚಾರ ಸುಗಮಗೊಳಿಸುತ್ತಾರೆ’ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಎಂ.ಎ.ಸಲೀಂ ತಿಳಿಸಿದರು.
‘ಎಲ್ಲೆಲ್ಲಿ ದಟ್ಟಣೆ ಉಂಟಾಗಿದೆ ಎಂಬುದು ತತ್ಕ್ಷಣವೇ ಪೊಲೀಸರಿಗೆ ಗೊತ್ತಾಗುವುದಿಲ್ಲ. ಆದರೆ, ಸವಾರರು ದಟ್ಟಣೆಯ ಬಿಸಿ ಎದುರಿಸುತ್ತಿರುತ್ತಾರೆ. ಅವರು ನೀಡುವ ಮಾಹಿತಿಯಿಂದ ಸಂಚಾರ ವ್ಯವಸ್ಥೆ ಸುಧಾರಣೆ ಆಗುತ್ತದೆ. ಹೀಗಾಗಿ ಇದೊಂದು ಜನಸ್ನೇಹಿ ವ್ಯವಸ್ಥೆ ಆಗಲಿದೆ’ ಎಂದು ಹೇಳಿದರು.
‘ಕುಂದಲಹಳ್ಳಿ, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ಮಹದೇವಪುರ, ವೈಟ್ಫೀಲ್ಡ್, ಹೆಬ್ಬಾಳ, ಪದ್ಮನಾಭನಗರ, ಬಳ್ಳಾರಿ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾದ ಬಗ್ಗೆ ಅಧಿಕ ದೂರುಗಳು ಬರುತ್ತಿವೆ. ಕೂಡಲೇ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಸಂಚಾರ ಸುಗಮಗೊಳಿಸಿದ್ದೇವೆ’ ಎಂದು ಟಿಎಂಸಿ ಸಿಬ್ಬಂದಿ ಹೇಳಿದ್ದಾರೆ.
ಸಹಾಯವಾಣಿ ಸಂಖ್ಯೆ: 7259-100- 100