ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದರೋಡೆ ಯತ್ನ: ಕಳ್ಳರಿಗೆ ಗುಂಡೇಟು

Last Updated 27 ಜನವರಿ 2015, 10:18 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರಣ್ಯಪುರದ ಸಪ್ತಗಿರಿ ಲೇಔಟ್‌ನಲ್ಲಿ ಮಂಗಳವಾರ ಬೆಳಗಿನ ಜಾವ ಮನೆಗೆ ಕನ್ನ ಹಾಕಲು ಹೊಂಚು ಹಾಕುತ್ತಿದ್ದ ಇಬ್ಬರು ಶಂಕಿತ ದರೋಡೆಕೋರರ ಮೇಲೆ  ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ.    ಶರಣಾಗುವಂತೆ ಸೂಚಿಸಿದರೂ ದರೋಡೆಕೋರರು ಪೊಲೀಸರ  ಮೇಲೆ ಕಬ್ಬಿಣದ ಸರಳಿನಿಂದ ದಾಳಿ ನಡೆಸಲು ಮುಂದಾದರು.   ರಕ್ಷಣೆಗಾಗಿ ಇನ್‌ಸ್ಪೆಕ್ಟರ್‌ ಪಂಜಿತ್‌ ಗುಂಡು ಹಾರಿಸಿದರು. ಗುಂಡು ದರೋಡೆಕೋರರ ಕಾಲಿಗೆ ತಗುಲಿ ಕುಸಿದು ಬಿದ್ದರು. ಇಬ್ಬರಿಗೂ ಗಾಯವಾಗಿದೆ. ಇಬ್ಬರನ್ನೂ ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ದರೋಡೆಕೋರರು ನಡೆಸಿದ  ದಾಳಿಯಲ್ಲಿ ಹೆಡ್‌ ಕಾನ್‌ಸ್ಟೆಬಲ್‌  ನಾಗಭೂಷಣ್‌ ಅವರಿಗೂ ಗಾಯವಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತರನ್ನು ಪಶ್ಚಿಮ ಬಂಗಾಳದ ಮಿಥುನ್‌ ಅಖಿಲ್‌ ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT