ಬೆಂಗಳೂರು: ಎ.ದಾಕ್ಷಾಯಿಣಿ ಭಟ್ ಅವರು ಸಂಗೀತ ನಾಟಕ ಅಕಾಡೆಮಿಯ 2013–14ನೇ ಸಾಲಿನ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ.
ಮೂಲತಃ ದಕ್ಷಿಣ ಕನ್ನಡದವರಾದ ಅವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಂಗಭೂಮಿ ವಿಭಾಗದಲ್ಲಿ ಈ ಗೌರವಕ್ಕೆ ಭಾಜನರಾಗಿದ್ದಾರೆ.
ನೀನಾಸಂ ವಿದ್ಯಾರ್ಥಿನಿಯಾಗಿರುವ ದಾಕ್ಷಾಯಿಣಿ, ಮಕ್ಕಳ ನಾಟಕವೂ ಸೇರಿ 70ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.