ಲಖನೌ (ಐಎಎನ್ಎಸ್): ದಾದ್ರಿ ಕೊಲೆ ಪ್ರಕರಣ ಸೇರಿದಂತೆ ಭಾರತದಲ್ಲಿ ಹೆಚ್ಚುತ್ತಿರುವ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ವಿಶ್ವಸಂಸ್ಥೆಯ ಗಮನ ಸೆಳೆಯುವುದಾಗಿ ಉತ್ತರ ಪ್ರದೇಶ ಸಚಿವ ಅಜಂ ಖಾನ್ ಸೋಮವಾರ ತಿಳಿಸಿದ್ದಾರೆ.
ಆರ್ಎಸ್ಎಸ್ ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿರುವುದೇ ದೇಶದಲ್ಲಿ ಕೋಮುವಾದಿ ಪ್ರಕರಣಗಳು ಹೆಚ್ಚಲು ಕಾರಣ ಎಂದು ಅಜಂ ಖಾನ್ ಆಪಾದಿಸಿದ್ದಾರೆ.
ದೇಶದಲ್ಲಿ ಶೇ.18ರಷ್ಟಿರುವ ಮುಸ್ಲಿಮರು ಅಸಹಾಯಕರಾಗಿದ್ದಾರೆ ಎಂದು ಅವರು ತಿಳಿಸಿಸಿದ್ದಾರೆ. ಈ ಬಗ್ಗೆ ವಿಶ್ವಸಂಸ್ಥೆಗೆ ಪತ್ರ ಬರೆಯಲಾಗುವುದು ಎಂದು ಅಜಂ ಖಾನ್ ಹೇಳಿದ್ದಾರೆ.