<p>ಬೆಂಗಳೂರು: ಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಬಿ.ಬಿ.ಕಲಿವಾಳ ಅವರನ್ನು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಲಾಗಿದೆ.<br /> <br /> ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರ ಕಚೇರಿ ಶನಿವಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ.<br /> ಸಾಹಿತಿ ಪ್ರೊ ಯು.ಆರ್.ಅನಂತಮೂರ್ತಿ ಅಧ್ಯಕ್ಷತೆಯ ಶೋಧನಾ ಸಮಿತಿ ಇದೇ ಮೊದಲ ಸಲ ಸಂದರ್ಶನದ ಮೂಲಕ ಕಲಿವಾಳ, ಬೆಂಗಳೂರು ವಿವಿಯ ಪ್ರೊ ಎಲ್.ಗೋಮತಿದೇವಿ ಮತ್ತು ಡಾ.ಜನಾರ್ದನಂ ಅವರ ಹೆಸರನ್ನು ಕುಲಪತಿ ಸ್ಥಾನಕ್ಕೆ ಶಿಫಾರಸು ಮಾಡಿತ್ತು.<br /> <br /> ನಿಯಮ ಪ್ರಕಾರ ಸರ್ಕಾರದ ಜತೆ ಸಮಾಲೋಚನೆ ನಡೆಸಿ ಈ ಮೂವರಲ್ಲಿ ಒಬ್ಬರನ್ನು ನೇಮಕ ಮಾಡಬೇಕು. ಆದರೆ, ಈ ವಿಷಯದಲ್ಲಿ ಸರ್ಕಾರದ ಮಾತು ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡಕ್ಕೆ ಸೇರಿದ ಗೋಮತಿದೇವಿ ಅವರನ್ನು ನೇಮಕ ಮಾಡುವಂತೆ ರಾಜ್ಯಪಾಲರಿಗೆ ಸಲಹೆ ಮಾಡಿದ್ದರು ಎನ್ನಲಾಗಿದೆ.<br /> <br /> <strong>ಅನಂತಮೂರ್ತಿ ಅಸಮಾಧಾನ</strong><br /> ಕಲಿವಾಳ ನೇಮಕಕ್ಕೆ ಅನಂತಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಈ ಆಯ್ಕೆ ನನಗೆ ಇಷ್ಟವಾಗಿಲ್ಲ. ಗೋಮತಿದೇವಿ ಅವರನ್ನೇ ಕುಲಪತಿಯಾಗಿ ನೇಮಕ ಮಾಡಬೇಕಾಗಿತ್ತು. ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿದ ನಂತರ ಹೆಚ್ಚಿನ ವಿವರ ನೀಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಬಿ.ಬಿ.ಕಲಿವಾಳ ಅವರನ್ನು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಲಾಗಿದೆ.<br /> <br /> ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರ ಕಚೇರಿ ಶನಿವಾರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ.<br /> ಸಾಹಿತಿ ಪ್ರೊ ಯು.ಆರ್.ಅನಂತಮೂರ್ತಿ ಅಧ್ಯಕ್ಷತೆಯ ಶೋಧನಾ ಸಮಿತಿ ಇದೇ ಮೊದಲ ಸಲ ಸಂದರ್ಶನದ ಮೂಲಕ ಕಲಿವಾಳ, ಬೆಂಗಳೂರು ವಿವಿಯ ಪ್ರೊ ಎಲ್.ಗೋಮತಿದೇವಿ ಮತ್ತು ಡಾ.ಜನಾರ್ದನಂ ಅವರ ಹೆಸರನ್ನು ಕುಲಪತಿ ಸ್ಥಾನಕ್ಕೆ ಶಿಫಾರಸು ಮಾಡಿತ್ತು.<br /> <br /> ನಿಯಮ ಪ್ರಕಾರ ಸರ್ಕಾರದ ಜತೆ ಸಮಾಲೋಚನೆ ನಡೆಸಿ ಈ ಮೂವರಲ್ಲಿ ಒಬ್ಬರನ್ನು ನೇಮಕ ಮಾಡಬೇಕು. ಆದರೆ, ಈ ವಿಷಯದಲ್ಲಿ ಸರ್ಕಾರದ ಮಾತು ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡಕ್ಕೆ ಸೇರಿದ ಗೋಮತಿದೇವಿ ಅವರನ್ನು ನೇಮಕ ಮಾಡುವಂತೆ ರಾಜ್ಯಪಾಲರಿಗೆ ಸಲಹೆ ಮಾಡಿದ್ದರು ಎನ್ನಲಾಗಿದೆ.<br /> <br /> <strong>ಅನಂತಮೂರ್ತಿ ಅಸಮಾಧಾನ</strong><br /> ಕಲಿವಾಳ ನೇಮಕಕ್ಕೆ ಅನಂತಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಈ ಆಯ್ಕೆ ನನಗೆ ಇಷ್ಟವಾಗಿಲ್ಲ. ಗೋಮತಿದೇವಿ ಅವರನ್ನೇ ಕುಲಪತಿಯಾಗಿ ನೇಮಕ ಮಾಡಬೇಕಾಗಿತ್ತು. ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿದ ನಂತರ ಹೆಚ್ಚಿನ ವಿವರ ನೀಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>