<p><strong>ಪಟ್ನಾ (ಪಿಟಿಐ): </strong>ಮನೆಯಲ್ಲಿ ಅಕ್ರಮ ಹಣ ಹೊಂದಿದ ಆರೋಪಕ್ಕೆ ಗುರಿಯಾಗಿ ಲೋಕಸಭಾ ಸದಸ್ಯತ್ವ ಕಳೆದುಕೊಳ್ಳುವ ಭೀತಿಯಲ್ಲಿರುವ ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ತಮ್ಮ ಮನೆಯಲ್ಲಿ ಸಿಕ್ಕ ದುಡ್ಡು ಉದ್ಯಮಿಯಾಗಿರುವ ಸೋದರ ಸಂಬಂಧಿಗೆ ಸೇರಿದ್ದು ಎಂದು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ನವಾಡಾ ಕ್ಷೇತ್ರ ಸಂಸದರಾಗಿರುವ ಸಿಂಗ್, ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಸೋದರ ಸಂಬಂಧಿ ರಾಕೇಶ್ ಸಿಂಗ್ ಅವರ ಜತೆಗೆ ಕೃಷ್ಣಪುರಿ ಪೊಲೀಸ್ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ.</p>.<p>‘ಆ ಹಣ ನನ್ನ ಸೋದರ ಸಂಬಂಧಿಯದ್ದು. ಪೊಲೀಸ್ ಅಧಿಕಾರಿಗಳಿಗೆ ಇದನ್ನು ತಿಳಿಸಿರುವೆ’ ಎಂದು ಬಳಿಕ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಈ ವೇಳೆ ಹಾಜರಿದ್ದ ಪಟ್ನಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಚಾರ ವಿಭಾಗದ ವರಿಷ್ಠಾಧಿಕಾರಿ ರಾಜೀವ್ ಮಿಶ್ರಾ ಅವರು ಹಾಜರಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ದೊರೆತ ಹಣ ಸೋದರ ಸಂಬಂಧಿಗೆ ಸೇರಿದ್ದು ಎಂದು ಗಿರಿರಾಜ್ ಸಿಂಗ್ ತಿಳಿಸಿದ್ದಾರೆ ಎಂದಿದ್ದಾರೆ.</p>.<p>ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ರಾಕೇಶ್ ಸಿಂಗ್, ಗೋವಿನ ಜೋಳದ ವ್ಯಾಪಾರದಲ್ಲೂ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ (ಪಿಟಿಐ): </strong>ಮನೆಯಲ್ಲಿ ಅಕ್ರಮ ಹಣ ಹೊಂದಿದ ಆರೋಪಕ್ಕೆ ಗುರಿಯಾಗಿ ಲೋಕಸಭಾ ಸದಸ್ಯತ್ವ ಕಳೆದುಕೊಳ್ಳುವ ಭೀತಿಯಲ್ಲಿರುವ ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ತಮ್ಮ ಮನೆಯಲ್ಲಿ ಸಿಕ್ಕ ದುಡ್ಡು ಉದ್ಯಮಿಯಾಗಿರುವ ಸೋದರ ಸಂಬಂಧಿಗೆ ಸೇರಿದ್ದು ಎಂದು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ನವಾಡಾ ಕ್ಷೇತ್ರ ಸಂಸದರಾಗಿರುವ ಸಿಂಗ್, ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಸೋದರ ಸಂಬಂಧಿ ರಾಕೇಶ್ ಸಿಂಗ್ ಅವರ ಜತೆಗೆ ಕೃಷ್ಣಪುರಿ ಪೊಲೀಸ್ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ.</p>.<p>‘ಆ ಹಣ ನನ್ನ ಸೋದರ ಸಂಬಂಧಿಯದ್ದು. ಪೊಲೀಸ್ ಅಧಿಕಾರಿಗಳಿಗೆ ಇದನ್ನು ತಿಳಿಸಿರುವೆ’ ಎಂದು ಬಳಿಕ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಈ ವೇಳೆ ಹಾಜರಿದ್ದ ಪಟ್ನಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಚಾರ ವಿಭಾಗದ ವರಿಷ್ಠಾಧಿಕಾರಿ ರಾಜೀವ್ ಮಿಶ್ರಾ ಅವರು ಹಾಜರಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ದೊರೆತ ಹಣ ಸೋದರ ಸಂಬಂಧಿಗೆ ಸೇರಿದ್ದು ಎಂದು ಗಿರಿರಾಜ್ ಸಿಂಗ್ ತಿಳಿಸಿದ್ದಾರೆ ಎಂದಿದ್ದಾರೆ.</p>.<p>ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ರಾಕೇಶ್ ಸಿಂಗ್, ಗೋವಿನ ಜೋಳದ ವ್ಯಾಪಾರದಲ್ಲೂ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>