ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬಾರೆ ಆನೆ ಶಿಬಿರಕ್ಕೆ ಪ್ರವಾಸಿಗರ ದಂಡು

Last Updated 17 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯದಾದ್ಯಂತ ಲೋಕ­ಸಭೆಗೆ ಗುರುವಾರ ಮತದಾನ ನಡೆಯು­ತ್ತಿ­ದ್ದರೂ ದುಬಾರೆ ಆನೆ ಶಿಬಿರದಲ್ಲಿ ಪ್ರವಾ­ಸಿಗರ ಸಂಖ್ಯೆಗೇನೂ ಕೊರತೆ ಇರ­ಲಿಲ್ಲ. ಮುಖ್ಯವಾಗಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಬಂದವರ ಸಂಖ್ಯೆ ಹೆಚ್ಚಿತ್ತು.

3– 4 ದಿನಗಳಿಂದ ಅಲ್ಲಲ್ಲಿ ಮಳೆ ಸುರಿದಿರುವುದರಿಂದ ದುಬಾರೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಹರಿವು ಕೊಂಚ ಹೆಚ್ಚಾಗಿದೆ. ಪ್ರವಾ­ಸಿಗರು ನದಿಯಲ್ಲಿ ಇಳಿದು ನೀರಿನಲ್ಲಿ ಚೆಲ್ಲಾಟ­ಆಡಿ­ದರು. ಆನೆ ಸಫಾರಿ ಮಾಡಿದರು.

ಯುವಕರು ಹಾಗೂ ಕುಟುಂಬ ಸಹಿತ ಬಂದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಈ ವಾರದಲ್ಲಿ ಸರಣಿ ರಜೆಗಳು ಬಂದಿರುವುದು ಕೂಡ ಇದಕ್ಕೆ ಕಾರಣ­ವಾಗಿ­ರಬಹುದು ಎಂದು ಟೂರಿಸ್ಟ್‌ ಗೈಡ್‌ ರಾಜು ಅಭಿಪ್ರಾಯ­ಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT