ನವದೆಹಲಿ(ಪಿಟಿಐ): ಮಹಾರಾಷ್ಟ್ರದ ಪಲ್ಗಾಂವ್ನ ಕೇಂದ್ರ ಶಸ್ತ್ರಾಗಾರದಲ್ಲಿ ಬೆಂಕಿ ದುರಂತ ಸಂಭವಿಸಿ ಯೋಧರು ಸಾವಿಗೀಡಾಗಿರುವುದು ನೋವಿನ ಸಂಗತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ದುರಂತ ಸಂಭವಿಸಿದ ಶಸ್ತ್ರಾಗಾರ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಹಾಗೂ ಇತರ ಮಾಹಿತಿ ಪಡೆಯುವಂತೆ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಅವರಿಗೆ ನರೇಂದ್ರ ಮೋದಿ ಅವರು ಸೂಚನೆ ನೀಡಿ ಟ್ವೀಟ್ ಮಾಡಿದ್ದಾರೆ.
‘ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖವಾಗಿಲಿ’ ಎಂದು ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ದುರದೃಷ್ಟಕರ
ದುರಂತ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಡಣವೀಸ್ ವಿಷಾದಿಸಿದ್ದಾರೆ.