ನವದೆಹಲಿ (ಐಎಎನ್ಎಸ್): ರಾಜಧಾನಿಯಲ್ಲಿ ಶುಕ್ರವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ 9 ಮಂದಿ ಮೃತಪಟ್ಟಿದ್ದಾರೆ. ಮೂರು ವಿಮಾನಗಳಿಗೆ ಹಾನಿಯಾಗಿದ್ದು, ಪ್ರತಿಕೂಲ ಹವಾಮಾನದ ಕಾರಣ ದೆಹಲಿಗೆ ಬರುತ್ತಿದ್ದ 21 ವಿಮಾನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 3ನೇ ಟರ್ಮಿನಲ್ನಲ್ಲಿ ನಿಲ್ಲಿಸಿದ್ದ ಮೂರು ವಿಮಾನಗಳಿಗೆ ಹಾನಿಯಾಗಿದೆ. ಸಂಚಾರ ಮಾರ್ಗ ಬದಲಾವಣೆಗೊಂಡ ವಿಮಾನಗಳಲ್ಲಿ ನಾಲ್ಕು ಅಂತರರಾಷ್ಟ್ರೀಯ ವಿಮಾನಗಳೂ ಸೇರಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.