ಬಿಜೆಪಿ ದೆಹಲಿ ಘಟಕದ ಅಧ್ಯಕ್ಷರಾದ ಸತೀಶ್ ಉಪಾಧ್ಯಯ ಅವರು ಇಂದು ರಾಜ್ಯಪಾಲ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಪ್ರಸಕ್ತ ಸಂದರ್ಭದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಮರು ಚುನಾವಣೆ ನಡೆಸುವುದೆ ಒಳಿತು ಎಂದು ಸತೀಶ್ ಅವರು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.
2015ರ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.
ಆದಾಗ್ಯೂ ಎಎಪಿ, ಕಾಂಗ್ರೆಸ್ ನ ಅಭಿಪ್ರಾಯ ಪಡೆದು ಮುಂದಿನ ನಡೆಯನ್ನು ತೀರ್ಮಾನಿಸಲಾಗುವುದು ಎನ್ನಲಾಗಿದೆ.