ನವದೆಹಲಿ (ಪಿಟಿಐ): ದೆಹಲಿ ವಿಧಾನಸಭೆಯನ್ನು ಬುಧವಾರ ವಿಸರ್ಜಿಸಲಾಗಿದ್ದು, ಹೊಸ ಚುನಾವಣೆಗೆ ದಾರಿ ಮಾಡಿಕೊಟ್ಟಿದೆ.
ನವೆಂಬರ್ 4ರಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಿಧಾನಸಭೆ ವಿಸರ್ಜನೆ ನಿರ್ಧಾರಕ್ಕೆ ಸಹಿ ಹಾಕಿದ್ದಾರೆ ಎಂದು ಗೃಹ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಶಿಫಾರಸು ಆಧರಿಸಿ ವಿಧಾನಸಭೆ ವಿಸರ್ಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.