ರಾಯಚೂರು: ಯುವ ನಾಯಕತ್ವ ಬೆಳೆಸಲು ಪೂರಕವಾಗಿ ನೆಹರು ಯುವ ಕೇಂದ್ರ ಕಾರ್ಯನಿರ್ವಹಣೆ ಮಾಡಬೇಕು. ಸರ್ಕಾರದ ಸೌಕರ್ಯಗಳನ್ನು ಸೂಕ್ತ ರೀತಿಯಲ್ಲಿ ಜನ ಸಾಮಾನ್ಯರಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಎಸ್,ಶಶಿಕಾಂತ್ ಸೆಂಥಿಲ್ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನೆಹರು ಯುವ ಕೇಂದ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕಳೆದ ಸಭೆ ನಡಾವಳಿಗಳ ಹಾಗೂ ಕಾರ್ಯಚಟುವಟಿಕೆ, ನೆಹರು ಯುವ ಕೇಂದ್ರಕ್ಕೆ ನಿವೇಶನ ಕಲ್ಪಿಸುವ, ಜಿಲ್ಲಾ ಮಟ್ಟದ ಯುವ ಸಂಘ ಪ್ರಶಸ್ತಿ ಆಯ್ಕೆ, ನೆಹರು ಯುವ ಸಾಥಿಗಳನ್ನು ಆಯ್ಕೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಯುವಕರಿಗೆ ವಿಶೇಷ ಚಟುವಟಿಕೆಗಳನ್ನು ನಡೆಸುವ ಮೂಲಕ ಯವಜನರಿಗೆ ದೇಶಾಭಿಮಾನ ಹಾಗೂ ಸೇವಾ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ನೆಹರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಯುವ ಸಮನ್ವಯಾಧಿಕಾರಿ ಮಾಲತಿ ಎಂ. ಗಾಯಕವಾಡ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ಬೋರೆಡ್ಡಿ, ವಿದ್ಯಾಸಾಗರ, ನೆಹರು ಯುವ ಕೇಂದ್ರದ ಅಧಿಕಾರಿಗಳು ಇದ್ದರು.