ನವದೆಹಲಿ (ಪಿಟಿಐ): ಸಂಸತ್ತಿನ ಚಳಿಗಾಲದ ಅಧಿವೇಶನ ನಾಳೆಯಿಂದ (ನವೆಂಬರ್ 26) ಆರಂಭಗೊಳ್ಳಲಿದೆ. ಡಿಸೆಂಬರ್ 23ವರೆಗೆ ಅಧಿವೇಶನ ನಡೆಯಲಿದೆ.
ಚಳಿಗಾಲದ ಅಧಿವೇಶನದಲ್ಲಿ ಭೂಸುಧಾರಣೆ ತಿದ್ದುಪಡಿ ಮಸೂದೆ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಸೂದೆ ಸೇರಿದಂತೆ ಹಲವು ಮಸೂದೆಗಳಿಗೆ ಒಪ್ಪಿಗೆ ಪಡೆಯಲು ಸರ್ಕಾರ ಸಿದ್ಧತೆ ನಡೆಸಿದೆ. ಆದರೆ, ಈ ಎಲ್ಲ ಮಸೂದೆಗಳನ್ನು ಸದ್ಯ ದೇಶದಾದ್ಯಂತ ಭಾರಿ ಚರ್ಚೆಯಲ್ಲಿರುವ ‘ಅಸಹಿಷ್ಣುತೆ’ ವಿಚಾರ ಬಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ದಾದ್ರಿ ಘಟನೆ, ಸಂಶೋಧಕ ಕಲಬುರ್ಗಿ ಹತ್ಯೆ ಪ್ರಕರಣಗಳು ಕೂಡ ಸಂಸತ್ತಿನಲ್ಲಿ ಸದ್ದು ಮಾಡಲಿವೆ.
ಅಸಹಿಷ್ಣುತೆ ವಿಚಾರವಾಗಿ ನಟ ಅಮೀರ್ ಖಾನ್ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಇಲ್ಲಿ ವೆಂಕಯ್ಯ ನಾಯ್ಡು ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ ಸೇರಿ ಚರ್ಚೆ ನಡೆಸಿತು.
ಬೆಂಗಳೂರು ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಚಳಿಗಾಲದ ಅಧಿವೇಶನದಲ್ಲಿ ಅಸಹಿಷ್ಣುತೆ ವಿಚಾರವನ್ನೇ ಪ್ರಮುಖವಾಗಿ ಪ್ರಸ್ತಾಪಿಸಲಾಗುವುದು ಎಂದು ಹೇಳಿದ್ದಾರೆ.