ನೆಲಮಂಗಲ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 108ನೇ ಜನ್ಮದಿನದ ಪ್ರಯುಕ್ತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಪಟ್ಟಣದ ಸಿದ್ಧಗಂಗಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಪ್ರಿಲ್ 1 ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಲಯನ್ಸ್ ಕ್ಲಬ್, ಶರಣ ಸಾಹಿತ್ಯ ಪರಿಷತ್ತು, ಕೆಂಪೇಗೌಡ ಸೇನೆ ಈ ಶಿಬಿರ ಹಮ್ಮಿಕೊಂಡಿವೆ.