ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ವಿವಿಧ ಪ್ರಶಸ್ತಿ ಪ್ರದಾನ

Last Updated 21 ಮೇ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಬಸವ ಪುರ­ಸ್ಕಾರ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಒಟ್ಟು 12 ಪ್ರಶಸ್ತಿ­ಗಳನ್ನು ಇದೇ 23ರಂದು ಪ್ರದಾನ ಮಾಡ­ಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದರು.

23ರಂದು ಸಂಜೆ 6ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಬುಧವಾರ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಆರ್‌.ವಿ.­ದೇವರಾಜ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಪಂಪ ಪ್ರಶಸ್ತಿ ಪುರಸ್ಕೃತರಾದ ಕಯ್ಯಾರ ಕಿಞ್ಞಣ್ಣ ರೈ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರು ಬೆಂಗಳೂರಿಗೆ ಬರಲು ಆಗುವುದಿಲ್ಲ. ಹೀಗಾಗಿ ಅವರ ಮನೆಯಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಮಾತುಕತೆ: ತೊಗಲು ಬೊಂಬೆಯಾಟ­ವನ್ನು ಯಕ್ಷಗಾನ ಬಯಲಾಟ ಅಕಾ­ಡೆಮಿ ವ್ಯಾಪ್ತಿಗೆ ಸೇರಿಸುವ ವಿಚಾರ­ದಲ್ಲಿ ಅಧ್ಯಕ್ಷ, ಸದಸ್ಯರ ನಡುವೆ ನಡೆ­ದಿರುವ ವಾಗ್ವಾದ ವಿಚಾರ ಪತ್ರಿಕೆ ಮೂಲಕ ಗೊತ್ತಾಗಿದೆ. ಇಲಾಖೆಯ ನಿರ್ದೇಶ­ಕರು ಅಧ್ಯಕ್ಷರೊಂದಿಗೆ ಮಾತ­ನಾಡಿ ಈ ವಿಷಯವನ್ನು ಬಗೆ­ಹರಿಸ­ಲಿ­ದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT