ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಜವಾದ ದೇಶಪ್ರೇಮ

Last Updated 29 ಜೂನ್ 2016, 19:30 IST
ಅಕ್ಷರ ಗಾತ್ರ

ಸಿಯಾಚಿನ್ ಹಿಮಪಾತದಲ್ಲಿ ವೀರಮರಣ ಹೊಂದಿದ ಧಾರವಾಡದ ಯೋಧ ಹನುಮಂತಪ್ಪ ಕೊಪ್ಪದ ಅವರ ಕುಟುಂಬಕ್ಕೆ ಕೇಂದ್ರ ಸರ್ಕಾರ ನೆರವು ನೀಡಲಿ. ಅವರು ಆಸ್ಪತ್ರೆಯಲ್ಲಿದ್ದಾಗ ಪ್ರಧಾನಿ ಭೇಟಿ ನೀಡಿದ್ದು ಬಿಟ್ಟರೆ ಕೇಂದ್ರದಿಂದ ಈವರೆಗೆ ಬೇರೆ ನೆರವು ಸಿಕ್ಕಿಲ್ಲ ಎಂದು ಕೊಪ್ಪದ ಅವರ ಪತ್ನಿ ಮಹಾದೇವಿ ಹೇಳಿದ್ದಾರೆ. ರಾಜ್ಯ ಸರ್ಕಾರ ತನ್ನ ನೆರವನ್ನು ನೀಡುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದೆ.

ಮಹಾದೇವಿ ಅವರ ಕನಸು ಬಹು ದೊಡ್ಡದಿದೆ. ಸಮಾಜ ಅವರ ಕನಸನ್ನು ನನಸಾಗಿಸಲು ಸಹಕರಿಸಬೇಕಿದೆ. ಪತಿಯ ಹೆಸರಿನಲ್ಲಿ ಸೈನಿಕ ತರಬೇತಿ ಶಾಲೆಯ ಜೊತೆಗೆ ಯೋಗ ತರಬೇತಿ ಕೇಂದ್ರ ನಿರ್ಮಿಸಲು ಪಣ ತೊಟ್ಟಿರುವ ಅವರಿಗೆ ಕೇಂದ್ರ ಸರ್ಕಾರ ಸಹಾಯ ಹಸ್ತ ಚಾಚಿ ಮಾನಸಿಕ ಸ್ಥೈರ್ಯ ತುಂಬಬೇಕಿದೆ.

ಬಿಜೆಪಿ ರಾಜ್ಯ ನಾಯಕರು ಯೋಧನ ಕುಟುಂಬದ ಸ್ಥಿತಿಯನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲಿ. ಇಂತಹ ಸಂದರ್ಭದಲ್ಲಿ ಸಹಾಯಹಸ್ತ ಚಾಚುವುದೇ ನಿಜವಾದ ದೇಶಪ್ರೇಮ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT